ಬಣವೆಗಳಿಗೆ ಕಿಡಿ ತಗುಲಿ ಸಾವಿರಾರು ರೂ. ಮೌಲ್ಯದ ಹುಲ್ಲು ಭಸ್ಮ: ರೈತರಿಗೆ ಭಾರೀ ನಷ್ಟ
Thousands of rupees worth of grass burnt to ashes after a fire broke out in the haystacks: Huge los
ಮುಂಡಗೋಡ 11 : ಮುಂಡಗೋಡದಿಂದ ಹಿಯಲ್ಲಾಪುರ ಕಡೆಗೆ ಹೋಗುವ ರಸ್ತೆ ಪಕ್ಕದ ದೊಡ್ಡ ಕೆರೆಯ ಎಡಭಾಗದಲ್ಲಿರುವ ಮಲ್ಲೇಶಪ್ಪ ಹುದ್ಲಮನಿ ಅವರ ಹೊಲದಲ್ಲಿ ಸಂಗ್ರಹಿಸಿದ್ದ ಹುಲ್ಲಿನ ಬಣವೆಗಳಿಗೆ ಆಕಸ್ಮಿಕವಾಗಿ ಕಿಡಿ ತಗುಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ಬೆಳಿಗ್ಗೆ 10.30ರಿಂದ 11 ಗಂಟೆಯೊಳಗೆ ನಡೆದಿದೆ. ಇದೇ ಸ್ಥಳದಲ್ಲಿ ಗಂಗಯ್ಯ ಹಿರೇಮಠ ಅವರಿಗೆ ಸೇರಿದ ಹುಲ್ಲಿನ ರೋಲ್ಗಳೂ ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಕಿಡಿಗಳು ಹುಲ್ಲಿನ ರಾಶಿಗೆ ತಗುಲಿದ ಪರಿಣಾಮ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಸ್ಥಳದಲ್ಲಿದ್ದ ಸುಮಾರು 200ಕ್ಕೂ ಹೆಚ್ಚು ಹುಲ್ಲಿನ ರೋಲ್ಗಳು ಹಾಗೂ ಪೆಂಡಿಗಳು ಸುಟ್ಟು ಕರಕಲಾಗಿವೆ.
ಗಂಗಯ್ಯ ಹಿರೇಮಠ ಅವರಿಗೆ ಸೇರಿದ ಸಂಗ್ರಹಿತ ಹುಲ್ಲಿನ ರೋಲ್ಗಳೂ ಸಂಪೂರ್ಣವಾಗಿ ನಾಶವಾಗಿವೆ. ಬೇಸಿಗೆ ಸಮಯದಲ್ಲಿ ಧನ- ಕರುಗಳಿಗೆ ಮೇವುಗಾಗಿ ಸಂಗ್ರಹಿಸಿಟ್ಟಿದ್ದ ಹುಲ್ಲು ಸುಟ್ಟು ಹೋದ ಕಾರಣ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಒಟ್ಟು ಸುಮಾರು 40,000 ರಿಂದ 50,000ರವರೆಗೆ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ಹುಲ್ಲಿನ ರೋಲ್ಗೆ ಸುಮಾರು 200 ವೆಚ್ಚವಾಗುತ್ತದೆ ಎಂದು ರೈತರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಸಂಪೂರ್ಣವಾಗಿ ನಂದಿಸಿದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 