ಯುವಕ ಮತ್ತು ಯುವತಿರಿಗಾಗಿ ಮೂರು ದಿನದ ಸಾಮರ್ಥ್ಯ ಬಲವರ್ಧನೆ ಹಾಗೂ ಮಾನವ ಹಕ್ಕುಗಳ ಕುರಿತು ತರಬೇತಿ
Three-day capacity building and human rights training for young men and women
ಕೊಪ್ಪಳ 09: ಯುವಜನರಿಗೆ ಮೂರು ದಿನದ ತರಬೇತಿ "ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ಬೆಂಗಳೂರು ಹಾಗೂ ಅಲ್ಪಸಂಸ್ಥೆ ಕೊಪ್ಪಳ್, ನೆರಳು ಸಂಸ್ಥೆ ಕೊಪ್ಪಳ್, ಅಂಗಳ ಸಂಸ್ಥೆ ಕೊಪ್ಪಳ್, ಇವರ ಸಂಯುಕ್ತ ಆಶ್ರಯದಲ್ಲಿ ಯುವಕ ಮತ್ತು ಯುವತಿರಿಗಾಗಿ ಮೂರು ದಿನದ ಸಾಮರ್ಥ್ಯ ಬಲವರ್ಧನೆ ಹಾಗೂ ಮಾನವ ಹಕ್ಕುಗಳ ಕುರಿತು ತರಬೇತಿಯನ್ನ ಕೊಡಲಾಯಿತು. ಒಂದು ಮೂರು ದಿನದ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಲೀಮಾ ಅವರು ಪಂಚಾಯತ್ ರಾಜ್ ಕಾಯ್ದೆ, ಗ್ರಾಮ ಪಂಚಾಯಿತಿಯಲ್ಲಿ ಇರತಕ್ಕಂತಹ ಸೌಲಭ್ಯಗಳ ಕುರಿತು ಜಾಗೃತಿಯನ್ನು ಮೂಡಿಸಿದರು ಹಾಗೂ ಇನ್ನೂರು ಸಂಪನ್ಮೂಲ ವ್ಯಕ್ತಿಗಳಾದ ಮಹಾಲಕ್ಷ್ಮಿ ಯವರು ಗ್ರಾಮ ಪಂಚಾಯತಿಗಳಲ್ಲಿ ಇರತಕ್ಕಂತಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇರತಕ್ಕಂತಹ ಸೌಲತ್ತುಗಳ ಬಗ್ಗೆ ವಿದ್ಯಾರ್ಥಿಗಳನ್ನು ವಿಷಯ ಮಂಡಿಸಿದರು ಹಾಗೂ ಸುಭಾನ್ ಸಾಹೇಬ್ ಮಾಹಿತಿ ಹಕ್ಕು ಅರ್ಜಿ ಹಾಗೂ ಮೇಲ್ಮನವಿ ಸಲ್ಲಿಸುವುದು ಹೇಗೆ ಎಂದು ತಿಳಿಹೇಳಿದರು, ಈ ಸಂದರ್ಭದಲ್ಲಿ ತರಬೇತಿದಾರರಾದ ಹಾಗೂ ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ನ ರಾಜ್ಯ ಸಯೋಜಕರಾದ ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು, ಈ ಮ್ಮೂರು ದಿನದ ಕಾರ್ಯಗಾರವು ಸಮೂಹ ಸಾಮರ್ಥ್ಯ ಕೊಪ್ಪಳ ಈ ಸಂಸ್ಥೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇ ತರಬೇತಿಯ ಸದುಪಯೋಗನು ಪಡೆದುಕೊಂಡರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 