ನರೇಗಾ ಯೋಜನೆ ಕುರಿತು ಮೂರು ದಿನದ ತರಬೇತಿ ಕಾರ್ಯಗಾರ ಉದ್ಘಾಟನೆ
Three day training workshop on Narega scheme inaugurated
ನರೇಗಾ ಯೋಜನೆ ಕುರಿತು ಮೂರು ದಿನದ ತರಬೇತಿ ಕಾರ್ಯಗಾರ ಉದ್ಘಾಟನೆ
ರಾಣೇಬೆನ್ನೂರು 27 : ಗ್ರಾಮೀಣ ಭಾಗದಲ್ಲಿ ಕೂಲಿ ಕಾಮಿರ್ಕರನ್ನು ಸಂಘಟಿಸಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಮಾಡುವಲ್ಲಿ ಕಾಯಕ ಬಂಧುಗಳು ಪಾತ್ರ ಬಹಳ ಮಹತ್ವದ್ದಾಗಿದೆ ಮತ್ತು ಅವರು ಯೋಜನೆಗೆ ಆಧಾರ ಸ್ಥಂಭವಾಗಿದ್ದಾರೆ ಎಂದು ತಾಪಂ ಇಒ ಪರಮೇಶ ಕರೆ ನೀಡಿದರು.ತಾಲೂಕಿನ ಕೃಷ್ಣಮೃಗ ಅಭಯಾರಣ್ಯದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮ ಸ್ವರಾಜ್ ಅಭಿಯಾನದಡಿ ಮತ್ತು ಜಿಪಂ, ತಾಪಂ ವತಿಯಿಂದ ತಾಲೂಕು ಮಟ್ಟದ ಕಾಯಕ ಬಂಧುಗಳಿಗಾಗಿ ಏರಿ್ಡಸಿದ್ದ ನರೇಗಾ ಯೋಜನೆ ಕುರಿತು ಮೂರು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ನರೇಗಾ ಯೋಜನೆ ಗ್ರಾಮೀಣ ಭಾಗದಲ್ಲಿ ಸುಸ್ತಿರವಾಗಿ ಅನುಷ್ಠಾನಗೊಳ್ಳಬೇಕಾದರೆ, ಯೋಜನೆಯ ಮಾಹಿತಿ ಕಾಯಕ ಬಂಧುಗಳಿಗೆ ಅತ್ಯಾವಶ್ಯವಾಗಿದೆ. ಮೂರು ದಿನದ ತರಬೇತಿಯಲ್ಲಿ ಯೋಜನೆಯ ನಡೆದು ಬಂದ ಹಾದಿ ಕಾಯಕ ಬಂಧುಗಳ ಪಾತ್ರ, ಕ್ರಿಯಾ ಯೋಜನೆ ತಯಾರಿಕೆ, ಸಮುದಾಯ ಆಸ್ತಿಗಳ ಅಭಿವೃದ್ಧಿ, ಕೂಲಿ ಕಾರ್ಮಿಕರ ಹಾಜರಾತಿ, ದಾಖಲಾತಿಗಳ ನಿರ್ವಹಣೆ ಮಾಡುವ ಕುರಿತು 3 ದಿನದಲ್ಲಿ ಒಂದು ದಿವಸ ಕ್ಷೇತ್ರ ಭೇಟಿಯಲ್ಲಿ ಕೂಲಿ ಕಾಮಿರ್ಕರೊಂದಿಗೆ ಸಂವಾದ ಕಾರ್ಯಕ್ರಮವಿದ್ದು, ಎರಡು ದಿನ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ಕಾಯಕ ಬಂಧುಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ನೀಡ್ಸ್ ಸಂಸ್ಥೆಯ ಮುಖ್ಯಸ್ಥ ಎಚ್.ಎಫ್. ಅಕ್ಕಿ ಮಾತನಾಡಿ, ರಾಜ್ಯದಲ್ಲಿ ಗ್ರಾಮ ಸ್ವರಾಜ್ ಅಡಿಯಲ್ಲಿ ರಾಜ್ಯದ 20 ಜಿಲ್ಲೆ 50 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಪ್ರತಿ ತಾಲೂಕಿನಿಂದ 300 ಜನ ಕಾಯಕ ಬಂಧುಗಳಿಗೆ ತರಭೇತಿಯನ್ನು ಸುಮಾರು ಏಳು ಬ್ಯಾಚಗಳಲ್ಲಿ ಪ್ರತಿ ಬ್ಯಾಚಗೆ 3 ದಿನಗಳವರೆಗೆ ತರಬೇತಿ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ವಿಜಯಕುಮಾರ ಹನಗೋಡಿಮಠ, ವನ್ಯಜೀವಿ ವಿಭಾಗದ ಎಸಿಎಫ್ ಸತೀಶ ಪೂಜಾರ, ಸಂಪನ್ಮೂಲ ವ್ಯಕ್ತಿಗಳಾದ ದಿಂಗಾಲೇಶ ಅಂಗೂರ, ಪರಶುರಾಮ ಅಂಬಿಗೇರ, ಶಿವಕುಮಾರ ಜಾಧವ, ಬಿಎಫ್ಟಿ ಪುಟ್ಟಪ್ಪ ಒಡೆಯರ, ಶ್ರೀನಿವಾಸ ಕೊಣ್ಣೂರ, ನಾಗಪ್ಪ ಪಾರ್ವತೇರ, ಹೊನ್ನಪ್ಪ ಅಜ್ಜೇರ, ಕಾಂತೇಶ ಐರಣಿ ಮತ್ತಿತರರು ಉಪಸ್ಥಿತರಿದ್ದರು.ಊ27-ಖಓಖ04-ಓಇಘಖ. ಂಓಆ. ಕಊಓಖಿಓ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 