ಟಿಪ್ಪು ಜಯಂತಿ : ಎರಡು ಗುಂಪಿನ ನಡುವೆ ಭುಗಿಲೆದ್ದ ಸಂಘರ್ಷ, 40 ಜನರ ಮೇಲೆ ಪ್ರಕರಣ
Tipu Jayanti: Conflict broke out between two groups, case against 40 people
ರಬಕವಿ-ಬನಹಟ್ಟಿ 27: ಟಿಪ್ಪು ಜಯಂತಿ ಕಾರ್ಯಕ್ರಮ ಹಿನ್ನಲೆಯಲ್ಲಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಕಟ್ಟಿದ್ದ ಹಸಿರು ರಿಬ್ಬನ್ ಹರಿದು ಹಾಕಿದ್ದಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದ ಘಟನೆ ಪರಿಣಾಮ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ 40 ಜನರ ಮೇಲೆ ಸ್ವಯಂ ಪ್ರಕರಣ ದಾಖಲಿಸಿಕೊಂಡ ವರದಿಯಾಗಿದೆ.
ಪ್ರತಿವರ್ಷದಂತೆ ಹೊಸೂರಿನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಎರಡು ಗುಂಪುಗಳಾಗಿ ಜಯಂತಿ ಆಚರಣೆ ಇಲ್ಲಿ ನಡೆಯುತ್ತಿದ್ದವು. ರಿಬ್ಬನ್ ಹರಿದ ಪರಿಣಾಮ ಒಂದು ಗುಂಪಿನ ವ್ಯಕ್ತಿಯೇ ಕಾರಣವೆಂದು ತಿಳಿದು ಮಂಗಳವಾರ ರಾತ್ರಿ 10-30ರ ಸುಮಾರಿಗೆ ಹೊಸೂರಿನ ಬನಶಂಕರಿ ದೇವಸ್ಥಾನ ಹತ್ತಿರದ ರಸ್ತೆಯಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಕೆಲವರ ಮೇಲೆ ಹಲ್ಲೆ ನಡೆದಿದೆ.
ಕಾರಣ : ಮೂರಾ್ನಲ್ಕು ವರ್ಷಗಳಿಂದ ಅಂಜುಮನ್ ಸಂಸ್ಥೆಯ ಲೆಕ್ಕಪತ್ರ ಕೇಳಿದ ವಿಚಾರಕ್ಕೆ ಮನಸ್ತಾಪ ಆರಂಭವಾಗಿತ್ತು. ಇದರ ಪರಿಣಾಮ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆಯುವಂತಾಗಿದೆ ಎನ್ನಲಾಗಿದೆ.
40 ಜನರ ಮೇಲೆ ಪ್ರಕರಣ ದಾಖಲು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಗುಂಪುಗಳ ಮಧ್ಯೆ 40 ಜನರ ಮೇಲೆ ಶಾಂತಿ ಕದಡುವ ಕಾರಣಕ್ಕೆ ಸ್ವಯಂ ಪ್ರಕರಣ ದಾಖಲು ಮಾಡಿಕೊಂಡಿರುವ ಬನಹಟ್ಟಿ ಪೊಲೀಸ್ ಠಾಣೆಯು ಪ್ರಕರಣದ ಕುರಿತು ಅತ್ಯಂತ ಸೂಕ್ಷ್ಮವಾಗಿ ಹೆಜ್ಜೆಯಿಡುತ್ತಿದೆ.
ಪಿಎಸ್ಐ ಶಾಂತಾ ಹಳ್ಳಿ ಸೇರಿದಂತೆ ಪೊಲೀಸ್ ತಂಡ ಹೊಸೂರಿನಲ್ಲಿಯೇ ಬಿಡಾರ ಹೂಡಿದ್ದು, ಶಾಂತಿ ಭಂಗ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಯಥಾಸ್ಥಿತಿಯಲ್ಲಿದ್ದು, ಎಂದಿನಂತೆ ದೈನಂದಿನ ಕೆಲಸ ಕಾರ್ಯಗಳಲ್ಲಿ ನಾಗರಿಕರಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 