ಸೈನಿಕರ ಸ್ಟೈರ್ಯ ಹೆಚ್ಚಿಸಲು ಮುಂಡಗೋಡದಲ್ಲಿ ತಿರಂಗಯಾತ್ರೆ
Tiranga Yatra in Mundagoda to boost the morale of soldiers
ಸೈನಿಕರ ಸ್ಟೈರ್ಯ ಹೆಚ್ಚಿಸಲು ಮುಂಡಗೋಡದಲ್ಲಿ ತಿರಂಗಯಾತ್ರೆ
ಮುಂಡಗೋಡ 25 : ಭಾರತದ ಸೈನಿಕರ ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ನಮ್ಮ ಸೈನಿಕರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಗೌರವ್ ಸಲ್ಲಿಸಲು ಉದ್ದೇಶದಿಂದ ಪಟ್ಟಣದಲ್ಲಿ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ತಿರಂಗಾ ಹಿಡಿದು 300,ಕ್ಕೂ ಹೆಚ್ಚು ಜನರು ತಿರಂಗಾ ಯಾತ್ರೆಯನ್ನು ಶನಿವಾರ ನಡೆಸಿದರು. ಪಟ್ಟಣದ ಹಳೂರಿನ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಚಾಲನೆ ನೀಡಿದ ನಂತರ ತಿರಂಗಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತ್ತು. ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ದೇಶಪ್ರೇಮ ಮೆರೆದರು. ತಿರಂಗಾಯಾತ್ರೆಯಲ್ಲಿ ಸೈನಿಕರು, ಮಾಜಿ ಸೈನಿಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ದೇಶಭಕ್ತ ನಾಗರಿಕರು ಉತ್ಸಾಹದಿಂದ ಯಾತ್ರೆಯಲ್ಲಿ ಪಾಲ್ಗೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 