ಇಂದು ‘ಬಾಗಿನಾಡು’ ಗ್ರಂಥ ಲೋಕಾರೆ್ಣ
Today, the book 'Baginadu' is a world-famous work
ಲೋಕದರ್ಶನ ವರದಿ
ಹಾರೂಗೇರಿ, 06 : ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ರಾಯಬಾಗ ಆಶ್ರಯದಲ್ಲಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ, ಲೇಖಕಿ ಡಾ.ರತ್ನಾ ಬಾಳಪ್ಪನವರ ಅವರ ಬಾಗಿನಾಡು ಗ್ರಂಥಲೋಕಾರೆ್ಣ ಸಮಾರಂಭ ಮಾ.7ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಿವಿನಾಯಕ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಶರಣ ವಿಚಾರ ವಾಹಿನಿ ಅಧ್ಯಕ್ಷ ಆಯ್.ಆರ್.ಮಠಪತಿ ಸಾನಿಧ್ಯ ಹಾಗೂ ರಾಯಬಾಗ ತಾಲೂಕು ಕಸಾಪ ಅಧ್ಯಕ್ಷ ಈರನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಚಿಂತಕ ಡಿ.ಎಸ್.ನಾಯಕ ಅವರು ಬಾಗಿನಾಡು ಗ್ರಂಥವನ್ನು ಲೋಕಾರೆ್ಣಗೊಳಿಸಲಿದ್ದಾರೆ. ಕಸಾಪ ಕಾರ್ಯದರ್ಶಿ ಶಂಕರ ಕ್ಯಾಸ್ತಿ ಗ್ರಂಥವನ್ನು ಪರಿಚಯಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಳಗಾವಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಹಿರಿಯ ಸಾಹಿತಿ ಡಾ.ವಿ.ಎಸ್.ಮಾಳಿ, ಪುರಸಭೆ ಅಧ್ಯಕ್ಷ ಜ್ಞಾನೇಶ್ವರ ಧರ್ಮಟ್ಟಿ, ಸಾಹಿತಿ ಶಿವಾನಂದ ಬೆಳಕೂಡ, ಲೇಖಕ ಬಾಲಕೃಷ್ಣ ಜಂಬಗಿ, ಆರ್.ಎಂ.ಗಸ್ತಿ, ಜಿನ್ನಪ್ಪ ಅಸ್ಕಿ, ಮಕ್ಕಳ ಸಾಹಿತಿ ಎಲ್.ಎಸ್.ಚೌರಿ, ಜೆ.ಎ.ನಿಲಜಗಿ, ಡಾ.ಆರ್.ಎಸ್.ಕಾಗವಾಡೆ ಆಗಮಿಸಲಿರುವರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 