ಇಂದು ಮುಧೋಳ ಬಂದ್
ಮುಧೋಳ 15: 2017-18 ನೇ ಸಾಲಿನ ಬಿಲ್ಲ ಬಾಕಿ ಹಣ ಕೊಡುವುದು ಹಾಗೂ ಪ್ರಸಕ್ತ ಹಂಗಾಮಿಗೆ ಕಬ್ಬಿನ ಬೆಲೆ ಘೋಷಣೆ ಮಾಡುವ ಕುರಿತು ಕಬ್ಬು ಬೆಳೆಗಾರರ ಬೇಡಿಕೆಯನ್ನು ಈಡೇರಿಸದ ಕಾಖರ್ಾನೆಗಳ ವಿರುದ್ದ ಶುಕ್ರವಾರ ಸಂತೆ ದಿನದಂದು ಮುಧೋಳ ಸಂಪೂರ್ಣ ಬಂದ್ ಕರೆ ನೀಡಲಾಗಿದೆ ಎಂದು ಕಬ್ಬು ಬೆಳೆಗಾರರ ಹೋರಾಟ ಸಮಿತಿಯ ಮುಖಂಡ ಕೆ.ಟಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಕಬ್ಬು ಬೆಳೆಗಾರರ ಹೋರಾಟಗಾರರು ತಮ್ಮ ಬೈಕ್ಗಳ ಮೂಲಕ ಗುರುವಾರ ದಂದು ನಗರದಲ್ಲಿ ಸಂಚರಿಸಿ ಎಲ್ಲ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬಂದ್ ಕರೆಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿರುವದಾಗಿ ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಬಂದ್ ಕರೆ ನೀಡಲಾಗಿದ್ದು,ಈ ಸಂದರ್ಭದಲ್ಲಿ ಹಾಲು ಸಾಗಿಸುವ ವಾಹನ ಮತ್ತು ಅಂಬ್ಯೂಲೆನ್ಸ್ ವಾಹನಗಳನ್ನು ಹೊರತು ಪಡಿಸಿ ಇತರೆ ಯಾವುದೆ ವಾಹನಗಳು ಸಂಚರಿಸದಂತೆ ನೋಡಿಕೊಳ್ಳಲಾಗುವುದು, ಕಾರಣ ಕಬ್ಬು ಬೆಳೆಗಾರರ ಸಮಿತಿಯವರು ಹಮ್ಮಿಕೊಂಡಿರುವ ಬಂದ್ ಕರೆಗೆ ಸಾರ್ವಜನಿಕರು ಬೆಂಬಲಿಸಿ, ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 