ಇಂದು ಉಚಿತ ಬೃಹತ್ ಆರೋಗ್ಯ ಶಿಬಿರ
ಲೋಕದರ್ಶನ ವರದಿ
ಹರಪನಹಳ್ಳಿ 02;ಗ್ರಾಮೀಣ ಭಾಗದ ಬಡರೋಗಿಗಳಿಗೆ ಅನುಕೂಲವಾಗುವ ಉದ್ದೇಶದಿಂದ 15 ರಿಂದ 20 ವೈಧ್ಯರ ತಂಡ ತಪಾಸಣೆಗೆ ಬೇಟಿ ನೀಡಿ ಎಲ್ಲಾ ರೀತಿಯ ಕಾಯಿಲೆಗಳಿಗೆ ತಪಾಸಣೆ ಪರೀಕ್ಷೆ ಮಾಡಲಿದ್ದಾರೆ ಎಂದು ಬೆಂಗಳೂರಿನ ತಥಾಗತ್ ಹಾಟರ್್ ಕೇರ್ ಸೆಂಟರ್ನ ಪ್ರಖ್ಯಾತ ತಜ್ಞಾ ಡಾ|| ಮಹಾಂತೇಶ್ ಆರ್. ಚರಂತಿಮಠ್ ಹೇಳಿದರು.
ಪಟ್ಟಣದ ಪ್ರವಾಸಿ ಮಂಧಿರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ತಥಾಗತ್ ಮೆಡಿಕಲ್ ಟ್ರಸ್ಟ್ ಹಾಗೂ ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಗೆ ಎ.ಡಿ.ಬಿ.ಕಾಲೇಜು ಆವರಣದಲ್ಲಿ ನಡೆಯಲಿರುವ ಉಚಿತ ಬೃಹತ್ ಆರೋಗ್ಯ ಶಿಬಿರದಲ್ಲಿ ಅನಾರೋಗ್ಯದಿಂದ ಬಾಳುತ್ತಿರುವ ಬಡ ರೋಗಿಗಳಿಗೆ ಅನುಕೂವಾಗುವ ಉದ್ದೇಶದಿಂದ ಇತರಹದ ಕ್ಯಾಂಪ್ ವ್ಯವಸ್ಥೆ ಮಾಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಕ್ತದೊತ್ತಡ, ಮಧುಮೇಹ,ಹೃದ್ರೋಗ, ಕ್ಯಾನ್ಸರ್ ಖಾಯಿಲೆಗಳ ತಪಾಸಣೆ ಮತ್ತು ಉಚಿತ ಔಷಧ ವಿತರಣಾ ಕಾರ್ಯಕ್ರಮ ಈ ಆರೋಗ್ಯ ಶಿಬಿರದಲ್ಲಿ ಅನುಭವಂತ ವೈಧ್ಯರ ತಂಡ ಆಗಮಿಸಲಿದ್ದಾರೆ. ಹೃದಯಕ್ಕೆ ಸಂಬಂಧಿಸಿದ, ಹೃದಯಾಘಾತ, ಹೃದಯ ರಕ್ತನಾಳ ಮತ್ತು ಕವಾಟಗಳ ಖಾಯಿಲೆಗಳು ಹುಟ್ಟಿನಿಂದ ಬಂದಂತಹ ಹೃದ್ರೋಗಗಳ, ಅತಿಯಾದ ರಕ್ತದೋತ್ತಡ ಬಿಪಿ.ಮಧುಮೇಹ ಇನ್ನಿತರ ಹೃದಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತ ತಪಾಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್ನ ಸಂಯೋಜಕರಾದ ಎಂ.ಪಿ.ವೀಣಾ ಮಹಾಂತೇಶ್, ವಕೀಲ ಸಿದ್ದನಗೌಡ, ಭಾಷಾಮುಜಗಲ್ , ಚೇತನ್, ಮಂಜುನಾಥ್, ಮತ್ತು ಇತರರು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 