ಇಂದು ಬನಶಂಕರಿ ದೇವಿ ರಥೋತ್ಸವ
Today is the Banashankari Devi Chariot Festival.
ಕೊಪ್ಪಳ 31 : ಪ್ರತಿವರ್ಷದಂತೆ ಈ ವರ್ಷವೂ ಕೂಡ ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮದಲ್ಲಿ ಜ.30 ರಿಂದ ಫೆ.02 ರವರೆಗೆ ಗ್ರಾಮದೇವತೆ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಜರುಗಲಿದ್ದು, ಫೆ.01 ರಂದು ಸಂಜೆ 5.45 ಕ್ಕೆ ರಥೋತ್ಸವ ಜರುಗಲಿದೆ.ಜಾತ್ರೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು, ಜ.30 ರಂದು ಶ್ರೀದೇವಿಗೆ ಕಂಕಣಧಾರಣ ಕಾರ್ಯಕ್ರಮ, ಜ.31 ರಂದು ಬೆಳಿಗ್ಗೆ 6.00 ರಿಂದ 9.30 ರವರೆಗೆ ದೇವಿಗೆ ಫಲಪೂಜಾ ಕಾರ್ಯಕ್ರಮ, ಫೆ.01 ರಂದು ಬೆಳಿಗ್ಗೆ ಹೋಮ ಹವನ ಕಾರ್ಯಕ್ರಮ ಮತ್ತು ಮುತೈದೆಯರಿಂದ ಊಡಿ ತುಂಬುವ ಕಾರ್ಯಕ್ರಮ, ದೇವಿಗೆ ಪುಷ್ಪಾಲಂಕಾರ ಪೂಜೆ, ತೇರಿನ ಮುಂಬಾಗದಲ್ಲಿ ರಂಗೋಲಿ ಸ್ಪರ್ಧೆ, ನಂತರ ಮಧ್ಯಾಹ್ನ 12 ಗಂಟೆಯಿಂದ ಕರಿಯಮ್ಮ ದೇವಸ್ಥಾನದ ಹತ್ತಿರ ಅನ್ನಸಂತರೆ್ಣ ನಡೆಯುವುದು, ಸಂಜೆ 5.45 ಗಂಟೆಗೆ ಮೈನಳ್ಳಿ ಹಿರೇಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಶ್ರೀಗಳ ಅಮೃತ ಹಸ್ತದಿಂದ ಧ್ವಜಾರೋಹಣ ನಂತರ ಶ್ರೀದೇವಿಯ ರಥೋತ್ಸವ ಜರುಗಲಿದೆ. ರಾತ್ರಿ 10 ಗಂಟೆಗೆ ಶ್ರೀ ಸಿದ್ದಲಿಂಗೇಶ್ವರ ನಾಟ್ಯ ಸಂಘದಿಂದ ರೈತ ಮನೆತನ ನಾಟಕ ಪ್ರದರ್ಶನ ಜರುಗಲಿದೆ. ಫೆ.02 ರಂದು ಬೆಳಿಗ್ಗೆ ಶ್ರೀದೇವಿಗೆ ಶಾಕಾಂಬರಿ ಪೂಜಾ, ಕಡುಬಿನ ಕಾಳಗ, ಮದ್ದು ಸುಡುವ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಹೊಂಬೆಳಕು ರಸಮಂಜರಿ ಕಾರ್ಯಕ್ರಮ, ಮೊದಲಾದ ಕಾರ್ಯಕ್ರಮಗಳು ಜರುಗಲಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ರಥೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಗ್ರಾಮಸ್ಥರು ಪ್ರಕಟಣೆಯ ಮೂಲಕ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 