ಇಂದು ಆರೇಂಜ್ ದಿ ವಲ್ಡ್ ಮಹಿಳಾ ಪಥ ಸಂಚಲನ
Today is the Orange the World Mahila Patha Sanchalana
ರಾಣಿಬೆನ್ನೂರು 02: ಮಹಿಳೆಯರು ಎಲ್ಲ ರಂಗದಲ್ಲಿಯೂ ಸಬಲರಾಗಿದ್ದರೂ ಕೂಡಾ ಇನ್ನೂ ಶೋಷಣೆಗಳು ಜೀವಂತವಾಗಿವೆ. ಅವರ ಮೇಲಿನ ಶೋಷಣೆ ತಡೆಯುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಇನ್ನರ್ ವ್ಹೀಲ್ ಸಂಸ್ಥೆ ಮತ್ತು ವಿವಿಧ ಸಂಘ, ಸಂಸ್ಥೆಗಳು, ಮಹಿಳಾ ಸಂಘಟನೆಗಳ ವತಿಯಿಂದ ನಗರದಲ್ಲಿ ಡಿ.3ರಂದು ಆರೇಂಜ್ ದಿ ವಲ್ಡ್ ಮಹಿಳಾ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ದೀಪಾಲಿ ಪುನೀತ್ ಹೇಳಿದರು.
ನಗರದ ಕಾಕಿ ಜನಸೇವಾ ಸಂಸ್ಥೆಯ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಡಿ.3ರಂದು ಬೆಳಗ್ಗೆ 8.30ಕ್ಕೆ ನಗರದ ಮುನ್ಸಿಪಲ್ ಮೈದಾನ ಬಳಿಯಿಂದ ಹೊರಡಲಿರುವ ಪಥ ಸಂಚಲನವು ಕುರಬಗೇರಿ ಕ್ರಾಸ್, ದುರ್ಗಾ ಸರ್ಕಲ್, ಎಂ.ಜಿ.ರಸ್ತೆ, ಪೊಸ್ಟ್ ಸರ್ಕಲ್ ಮಾರ್ಗವಾಗಿ ಅಶೋಕ ಸರ್ಕಲ್ಗೆ ಬಂದು ಸೇರಲಿದೆ. ಇದರಲ್ಲಿ ಶಾಸಕ ಪ್ರಕಾಶ ಕೋಳಿವಾಡ ದಂಪತಿ, ಮಾಜಿ ಶಾಸಕ ಅರುಣಕುಮಾರ ಪೂಜಾರ ದಂಪತಿ ಹಾಗೂ ನಗರದ ವಿವಿಧ ಸಂಘ, ಸಂಸ್ಥೆಗಳು, ಮಹಿಳಾ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದರು. ಪುಷ್ಪಾ ಮಾಳಗಿ, ಸುಮಾ ಹೊಟ್ಟಿಗೌಡ್ರ, ಲಕ್ಷ್ಮೀ ಕಾಕಿ, ರೂಪಾ ಕಾಕಿ, ಶಿಲ್ಪಾ ಸಾವಕಾರ, ಸಂಜನಾ ಕುರುವತ್ತಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 