ಇಂದು ಭೀಮಾ ಕೋರೆಗಾಂವ ವಿಜಯೋತ್ಸವ
Today is the victory celebration of Bhima Koregaon.
ಮಹಾಲಿಂಗಪುರ:ನಗರದಲ್ಲಿ 4ನೇ ಬಾರಿಗೆ 2008ನೇ ಭೀಮಾ ಕೋರೆಗಾಂವ ವಿಜಯೋತ್ಸವ ಕಾರ್ಯಕ್ರಮ ಶನಿವಾರ ಮುಂಜಾನೆ 10 ಗಂಟೆಗೆ ಸ್ಥಳೀಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪೇಶ್ವೆಗಳ ವಿರುದ್ಧ ಸ್ವಾಭಿಮಾನದಿಂದ ಹೋರಾಡಿ ಗೆದ್ದು ಜಯಶಾಲಿಯಾದ ವೀರ ಮಹರ್ ಸೈನಿಕರಿಗೆ ಗುರು, ಹಿರಿಯರು ಮತ್ತು ಮುಖಂಡರೊಂದಿಗೆ ಠಾಣಾಧಿಕಾರಿ ಕಿರಣ ಸತ್ತಿಗೆರಿ ಪುಷ್ಪ ನಮನ ಸಲ್ಲಿಸುವರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರುವ ಅಂಬೇಡ್ಕರ್ ಅಭಿಮಾನಿಗಳಿಂದ ಬೈಕ್ ರ್ಯಾಲಿ ನಡೆಯುವುದು.
ಸಮುದಾಯದ ಶಕ್ತಿಯನ್ನು ಆಂದೋಲನದ ರೂಪಕ್ಕೆ ಕೊಂಡೋಯ್ದ ಹಿರಿಮೆ ಡಾ. ಬಿ.ಆರ್.ಅಂಬೇಡ್ಕರ್ ಅವರು ಸ್ಥಾಪಿಸಿದ ಮೂಕ ನಾಯಕ ಪತ್ರಿಕೆಯದ್ದು.ಇದರ ಶತಮಾನೋತ್ಸವ ಸಮಾರಂಭವು ಕೂಡ ನಡೆಯಲಿದೆ. ಇದೆ ಸಂಜೆ 6 ಗಂಟೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯ ಮೆರವಣಿಗೆ ಬಸವೇಶ್ವರ ಸರ್ಕಲ್ ದಿಂದ ಆರಂಭವಾಗಿ ನಡುಚೌಕಿ,ಗಾಂಧಿ ಸರ್ಕಲ್ ಮಾರ್ಗವಾಗಿ ಮರಳಿ ಬಿ.ಆರ್. ಅಂಬೇಡ್ಕರ್ ಸರ್ಕಲ್ ಗೆ ಆಗಮಿಸಿ, ಪ್ರಸ್ತುತ ಇರುವ ಮುಖಂಡರುಗಳಿಂದ ಭೀಮಾ ಕೋರೆಗಾಂವ ಹೋರಾಟದ ಇತಿಹಾಸ ಕುರಿತು ಭಾಷಣ ನಡೆಯಲಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 