ರಾಜ್ಯದ ಕರಾವಳಿಯ 10 ದ್ವೀಪಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಸಚಿವ ಮಂಕಾಳ ವೈದ್ಯ
Tourism development in 10 islands off the state's coast: Minister Mankala Vaidya
ಕಾರವಾರ 12: ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ, ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳಲ್ಲಿನ 20 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದ್ದು, ಅವುಗಳಲ್ಲಿ ಈಗಾಗಲೇ 10 ದ್ವೀಪಗಳಲ್ಲಿ ಫಿಸಿಬಿಲಿಟಿ ಸರ್ವೇ ಮಾಡಿ, ಇಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬಹುದೆಂದು ವರದಿ ಪಡೆಯಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ. ಅವರು ಸೋಮವಾರ ಭಟ್ಕಳದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದ ಕರಾವಳಿ ಪ್ರದೇಶದಲ್ಲಿ ಸಿಆರ್ಝಡ್ನ ದೊಡ್ಡ ಸಮಸ್ಯೆ ಇದ್ದು, ಅದನ್ನು ಇತ್ಯರ್ಥಪಡಿಸಬೇಕಿದೆ. ಸಿ.ಆರ್.ಝಡ್ ನ ಪರಿಷ್ಕೃತ ಮ್ಯಾಫ್ ಅನುಮೋದನೆ ಮಾಡಲು ರಾಜ್ಯದಲ್ಲೇ ಇದುವರೆಗೆ ಯಾವುದೇ ಸಂಸ್ಥೆ ಇಲ್ಲವಾಗಿದ್ದು, ಇದಕ್ಕಾಗಿ ಪಕ್ಕದ ರಾಜ್ಯಗಳನ್ನು ಅವಲಂಬಿಸಬೇಕಿತ್ತು. ಅದರೆ ಪ್ರಸ್ತುತ ರಾಜ್ಯದಲ್ಲೇ ಸಿಆರ್ಝಡ್ ಮ್ಯಾಫ್ ಅನುಮೋದನೆ ಮಾಡುವ ಸಂಸ್ಥೆಯನ್ನು ಗುರುತಿಸಲಾಗಿದ್ದು, ಇದರಿಂದ ರಾಜ್ಯದಲ್ಲಿನ ಸಿಆರ್ಝಡ್ ಸಂಬಂದಿತ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯಲಿದೆ ಎಂದರು. ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೂಡಿಕೆದಾರರು ಮುಂದೆ ಬಂದಲ್ಲಿ , ಅವರಿಗೆ ಗತ್ಯವಿರುವ ಬ್ಯಾಂಕ್ ಸಾಲ, ಸಬ್ಸಿಡಿ, ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಹೂಡಿಕೆದಾರರಿಗೆ ಪೂರಕವಾದ ಎಲ್ಲಾ ರೀತಿಯ ಸೌಲಬ್ಯಗಳನ್ನು ಒದಗಿಸಲಾಗುವುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 