ವಿದ್ಯುತ್ ತಂತಿ ತಗುಲಿ ಕಬ್ಬು ತುಂಬಿದ ಟ್ರ್ಯಾಕ್ಟರಗೆ ಬೆಂಕಿ
Tractor loaded with sugarcane catches fire after hitting an electric wire
ಜಮಖಂಡಿ 20: ನಗರದ ಚಂದ್ರಗಿರಿ ಪೇಠದ ಹತ್ತಿರ ಕಬ್ಬು ತುಂಬಿದ ಟ್ರ್ಯಾಕ್ಟರ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಜರುಗಿದೆ. ರಬಕವಿ- ಬನಹಟ್ಟಿ ತಾಲೂಕಿನ ರಬಕವಿಯ ಮಾದೇವ ಲಕ್ಷ್ಮಣ ಕುರಾಬಿ ಅವರ ಟ್ರ್ಯಾಕ್ಟರ ಚಾಲಕ ವಿಠ್ಠಲ ಯಂಕಪ್ಪ ಗಸ್ತಿ ಕಬ್ಬು ತುಂಬಿಕೊಂಡು ಸಿದ್ದಾಪೂರ ಸಕ್ಕರೆ ಕಾರ್ಖಾನೆಗೆ ಹೋಗುವ ಸಮಯದಲ್ಲಿ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದಿರುತ್ತದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳಾದ ಎ.ಎಸ್.ಒ. ನಿಂಗಪ್ಪ ಹೂಗಾರ, ಸಿಬ್ಬಂದಿಗಳಾದ ಮಾದೇವ ಹಳೇಗೌಡರ, ಟಿ.ವಾಯ್.ಭಂಡಾರಿ, ಎಸ್.ಎಸ್.ಭಜಂತ್ರಿ, ಕೆ.ಬಿ.ಮುಲ್ಲಾ, ಶ್ರೀಶೈಲ ಹಿರೇಮಠ ಸೇರಿ ಅಗ್ನಿಯನ್ನು ನಂದಿಸಲು ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಶಹರ ಪೋಲಿಸ್ ಠಾಣೆಯ ಸಿಬ್ಬಂದಿಗಳು ಸಹ ಇದ್ದರು ಎನ್ನಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 