ವಿದ್ಯುತ್ ತಂತಿ ತಗುಲಿ ಕಬ್ಬು ತುಂಬಿದ ಟ್ರ್ಯಾಕ್ಟರಗೆ ಬೆಂಕಿ
Tractor loaded with sugarcane catches fire after hitting an electric wire
ಜಮಖಂಡಿ 20: ನಗರದ ಚಂದ್ರಗಿರಿ ಪೇಠದ ಹತ್ತಿರ ಕಬ್ಬು ತುಂಬಿದ ಟ್ರ್ಯಾಕ್ಟರ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಜರುಗಿದೆ. ರಬಕವಿ- ಬನಹಟ್ಟಿ ತಾಲೂಕಿನ ರಬಕವಿಯ ಮಾದೇವ ಲಕ್ಷ್ಮಣ ಕುರಾಬಿ ಅವರ ಟ್ರ್ಯಾಕ್ಟರ ಚಾಲಕ ವಿಠ್ಠಲ ಯಂಕಪ್ಪ ಗಸ್ತಿ ಕಬ್ಬು ತುಂಬಿಕೊಂಡು ಸಿದ್ದಾಪೂರ ಸಕ್ಕರೆ ಕಾರ್ಖಾನೆಗೆ ಹೋಗುವ ಸಮಯದಲ್ಲಿ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದಿರುತ್ತದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳಾದ ಎ.ಎಸ್.ಒ. ನಿಂಗಪ್ಪ ಹೂಗಾರ, ಸಿಬ್ಬಂದಿಗಳಾದ ಮಾದೇವ ಹಳೇಗೌಡರ, ಟಿ.ವಾಯ್.ಭಂಡಾರಿ, ಎಸ್.ಎಸ್.ಭಜಂತ್ರಿ, ಕೆ.ಬಿ.ಮುಲ್ಲಾ, ಶ್ರೀಶೈಲ ಹಿರೇಮಠ ಸೇರಿ ಅಗ್ನಿಯನ್ನು ನಂದಿಸಲು ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಶಹರ ಪೋಲಿಸ್ ಠಾಣೆಯ ಸಿಬ್ಬಂದಿಗಳು ಸಹ ಇದ್ದರು ಎನ್ನಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 