ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಿಗೆ ತರಬೇತಿ
Training for teachers who teach Kannada to non-Kannada speakers
ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಿಗೆ ತರಬೇತಿ
ಬೆಳಗಾವಿ 04: ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಿಗೆ ತರಬೇತಿ ನೀಡುವ ಎರಡು ದಿನಗಳ ಶಿಬಿರವು ಕಳೆದ ಶನಿವಾರ ಮತ್ತು ನಿನ್ನೆ ರವಿವಾರದಂದು ನಾಗನೂರು ರುದ್ರಾಕ್ಷಿ ಮಠದ ಪಿ.ಯು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೆ.ಎಲ್.ಇ.ವೇಣುಧ್ವನಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಸಹಯೋಗದಲ್ಲಿ " ನಾನು,ನಮ್ಮವರೊಂದಿಗೆ" ಸಂಸ್ಥೆಯು ಈ ಶಿಬಿರವನ್ನು ಆಯೋಜಿಸಿತ್ತು.
ರವಿವಾರ ಸಂಜೆ ನಡೆದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಅವರು ಶಿಬಿರಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಶಿಬಿರದ ನಿರ್ದೇಶಕ ಬೆಂಗಳೂರಿನ ಪ್ರೊ.ಅಬ್ದುಲ್ ರೆಹಮಾನ್ ಪಾಶಾ, ಸಂಸ್ಥೆಯ ಪದಾಧಿಕಾರಿ ಜ್ಯೋತಿ ಬದಾಮಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. 25 ಕ್ಕೂ ಅಧಿಕ ಶಿಬಿರಾರ್ಥಿಗಳು ಎರಡು ದಿನಗಳ ಕಾಲ ತರಬೇತಿ ಪಡೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 