ಮುಂಗಾರು ಬೀಜ ಆಂದೋಲನ, ಸುರಕ್ಷಿತ ಕೀಟನಾಶಕ ಬಳಕೆ ಕುರಿತು ತರಬೇತಿ
ಕೊಪ್ಪಳ 16: ಕೊಪ್ಪಳದ ಕೃಷಿ ಇಲಾಖೆ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸಹಯೋಗದಲ್ಲಿ ಇರಕಲ್ಲಗಡ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ತಾಳಕನಕಾಪುರ ಗ್ರಾಮದಲ್ಲಿ ಮುಂಗಾರು ಬೀಜ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು.
ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಙಾನಿ ಪಿ. ಆರ್. ಬದರಿಪ್ರಸಾದ್ ರವರು ಮಂಜುನಾಥ ಸಂಗಟಿ ಯವರ ಹೊಲದಲ್ಲಿ ತರಬೇತಿ ಹಮ್ಮಿಕೊಂಡಿದ್ದು, ರೈತರಿಗೆ ಬೀಜೋಪಚಾರದ ಮಹತ್ವ ಹಾಗು ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಯಾಗಿರುವ ವಿವಿದ ಬೆಳೆಗಳ ನೂತನ ತಳಿಗಳ ವಿವರವನ್ನು ನೀಡಿದರು. ನಂತರ ರೈತರಿಗೆ ಸುರಕ್ಷಿತ ಪೀಡೆನಾಶಕ ಬಳಕೆ ಹಾಗು ವೈಯುಕ್ತಿಕ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಹಾಗೂ ಮುಂಗಾರು ಬೀಜಗಳ ಬೀಜೋಪಚಾರ ಮಾಡುವ ವಿಧಾನವನ್ನು ಪದ್ದತಿ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ತೋರಿಸಲಾಯಿತು. ಕೃಷಿ ಅಧಿಕಾರಿ ಮಹೇಶ್ ರೈತರಿಗೆ ಇಲಾಖಾ ಕಾರ್ಯಕ್ರಮಗಳ ಮಾಹಿತಿ ಹಾಗು ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ಅಧಿಕಾರಿ ಸಿದ್ರಾಮರೆಡ್ಡಿ ಹಾಗೂ ಅನುವುಗಾರ ಶರಣಪ್ಪ, ಜಾಫರ್, ಚನ್ನಪ್ಪ, ಅಂಬಣ್ಣ ಮತ್ತು ಪ್ರಗತಿಪರ ರೈತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 