ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ
Transport workers' strike: Passengers' protest
ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ
ದೇವರಹಿಪ್ಪರಗಿ 05: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಪ್ರಯಾಣಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಮಂಗಳವಾರದಂದು ಸಾರಿಗೆ ಬಸ್ ನೌಕರರ ಹಾಗೂ ಸಂಘಟನೆಗಳ ಒಕ್ಕೂಟದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದರ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ದರ್ಬಾರ ಜೋರಾಗಿ ನಡೆದಿತ್ತು.ಮುಖ್ಯಮಂತ್ರಿಗಳು ನಡೆಸಿದ ಮನವೊಲಿಕೆ ಪ್ರಯತ್ನ ವಿಫಲ ಹಾಗೂ ಒಂದು ದಿನ ಮಟ್ಟಿಗೆ ಮುಸ್ಕರಕ್ಕೆ ತಡೆ ನೀಡಿ ಕೋರ್ಟ್ ಆದೇಶ, ಇದರ ಮಧ್ಯಯೇ ಸಾರಿಗೆ ನೌಕರರ ಮುಷ್ಕರ. ಅವರ ವಿವಿಧ ಬೇಡಿಕೆಗಳಾದ ಸಾರಿಗೆ ನೌಕರರ 38ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು, ಹಿಂದಿನ 2024ರ ಜ 1ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಬೇಕು, ಖಾಸಗೀಕರಣ ನಿಲ್ಲಬೇಕು, ವಿದ್ಯುತ್ ಚಾಲಿತ ಬಸ್ ನಲ್ಲೂ ಸಾರಿಗೆ ಸಂಸ್ಥೆ ಯ ಚಾಲಕರನ್ನೇ ನಿಯೋಜಿಸಬೇಕು ಎಂಬ ಹಲವಾರು ಬೇಡಿಕೆಗಳನ್ನಿಟ್ಟು ಸಾರಿಗೆ ನೌಕರರು ಮುಸ್ಕರಕ್ಕೆ ಇಳಿದಿದ್ದಾರೆ.
ಬಸ್ ಹಾಗೂ ಪ್ರಯಾಣಿಕರು ಇಲ್ಲದರಿಂದ ಬಸ್ ನಿಲ್ದಾಣ ಖಾಲಿ ಖಾಲಿ ಯಾಗಿದೆ. ಪ್ರಯಾಣಿಕರು ಪರ್ಯಾಯವಾಗಿ ವಿಜಯಪುರಕ್ಕೆ ಹೋಗಲು ಖಾಸಗಿ ವಾಹನದಲ್ಲಿ ರೂಪಾಯಿ 70-100 ಕೊಟ್ಟು ಪ್ರಯಾಣಿಕರು ತಮ್ಮ ದಿನ ನಿತ್ಯದ ಕೆಲಸಗಳಿಗೆ ಹೋಗಲು ಖಾಸಗಿ ವಾಹನದಲ್ಲಿ ಪ್ರಯಾಣ ಅನಿವಾರ್ಯವಾಗಿತ್ತು. ಸರಕಾರ ಈಗಲಾದರೂ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಿ ಮುಷ್ಕರ ಹಿಂಪಡೆಯಲು ಮನ ವಲಿಸಬೇಕು ಎಂದು ಸಾರ್ವಜನಿಕರ ಆಶಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 