ಜನ್ಮ ಅಮೃತ ಮಹೋತ್ಸವ ನಿಮಿತ್ಯ ಸಿ.ಎಚ್.ಬಾಳನಗೌಡರಿಗೆ ಗೌರವ ಸನ್ಮಾನ
Tribute to CH Balana Gowda on the occasion of Janma Amrita Mahotsava
ಜನ್ಮ ಅಮೃತ ಮಹೋತ್ಸವ ನಿಮಿತ್ಯ ಸಿ.ಎಚ್.ಬಾಳನಗೌಡರಿಗೆ ಗೌರವ ಸನ್ಮಾನ
ಬಾಳೆಹೊನ್ನೂರು 17 ; ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ಅವರಿಗೆ ಅವರ ಜನ್ಮ ಅಮೃತ ಮಹೋತ್ಸವದ ನಿಮಿತ್ಯ ಗೌರವ ಸನ್ಮಾನ ನೀಡಿ ಆಶೀರ್ವದಿಸಲಾಯಿತು.ಭಾನುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹಾಗೂ ಶ್ರೀ ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗಿದ ಶ್ರೀಮದ್ ರಂಭಾಪುರಿ ಜಗದ್ಗುರು ವೀರರುದ್ರಮುನಿದೇವ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಸಿ.ಎಚ್. ಬಾಳನಗೌಡರಿಗೆ “ವಾರ್ತಾ ಸೇವಾ ಸಂಜೀವಿನಿ” ಎಂಬ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶ್ರೀಮದ್ ರಂಭಾಪುರಿ ರುದ್ರಮುನಿ ಜಗದ್ಗುರುಗಳವರ ಕುರಿತಾದ “ಧರ್ಮ ಚೇತನ” ಕೃತಿ ಮತ್ತು ಸಿ.ಎಚ್.ಬಾಳನಗೌಡ್ರ ಅವರ ಬಾಳ ಪಯಣದ “ಬಾಳ ಹೊಂಗಿರಣ” ಕೃತಿ ಬಿಡುಗಡೆಗೊಂಡವು. ಸಿ.ಎಚ್.ಬಾಳನಗೌಡ್ರ ಅವರು ಕಳೆದ 3 ದಶಕಗಳಿಂದ ಶ್ರೀ ರಂಭಾಪುರಿ ಪೀಠದ ಸುದ್ದಿ ಪ್ರಸಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾರಂಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಕೆ.ಜೆ.ಜಾರ್ಜ, ಶಾಸಕರಾದ ಟಿ.ಡಿ.ರಾಜೇಗೌಡ, ಹೆಚ್.ಡಿ.ತಮ್ಮಯ್ಯ ಹಾಗೂ ವಿವಿಧ ಮಠಗಳ ಶ್ರೀಗಳು ಉಪಸ್ಥಿತರಿದ್ದರು. ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಯಜ್ಞಪುರುಷ ಭಟ್ಟರು ಇದೇ ಸಂದರ್ಭದಲ್ಲಿ ಸಿ.ಎಚ್.ಬಾಳನಗೌಡ್ರ ಇವರಿಗೆ ಶಾಲು ಹೊದಿಸಿ ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 