ಕಾರ್ಯನಿರ್ವಾಹಕ ಇಂಜಿನಿಯರ ನಾರಾಯಣ ಕಳ್ಳಿಮನಿಗೆ ಗೌರವ ಸನ್ಮಾನ
Tribute to Executive Engineer Narayan Kakhmani
ಕಾರ್ಯನಿರ್ವಾಹಕ ಇಂಜಿನಿಯರ ನಾರಾಯಣ ಕಳ್ಳಿಮನಿಗೆ ಗೌರವ ಸನ್ಮಾನ
ಶಿಗ್ಗಾವಿ 10: ತಾಲೂಕ ಗುತ್ತಿಗೆದಾರ ಸಂಘದ ಪದಾಧಿಕಾರಿಗಳು ಹಾವೇರಿ ಹೆಸ್ಕಾಂ ವಿಭಾಗದ ನೂತನ ಕಾರ್ಯನಿರ್ವಾಹಕ ಇಂಜಿನಿಯರ ನಾರಾಯಣ ಕಳ್ಳಿಮನಿಯವರು ಕಾರ್ಯನಿಮಿತ್ಯ ಶಿಗ್ಗಾವ್ ವಿಭಾಗ ಕಚೇರಿಗೆ ಭೇಟಿ ನೀಡಿದಾಗ ಆತ್ಮೀಯವಾಗಿ ಸ್ವಾಗತಿಸಿ ನಂತರ ಸನ್ಮಾನಿಸಿ ಗೌರವಿಸಲಾಯಿತು.
ಪೂರ್ವ ನಿಯೋಜಿತ ರಾಜ್ಯ ಗುತ್ತಿಗೆದಾರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಮಂಜುನಾಥ ಮಣ್ಣಣ್ಣವರ ಸ್ಥಳೀಯವಾಗಿ ಮಾಧ್ಯಮ ವರ್ಗದ ಗುತ್ತಿಗೆದಾರವಿದ್ದು ಇಲಾಖೆ ಸಹಕಾರ ಕೋರುತ್ತೇವೆ ಜೊತೆಗೆ ತುಂಡುಗುತ್ತಿಗೆಗಳ ಕೆಲಸಗಳನ್ನು ಸ್ಥಳೀಯವಾಗಿ ಇರುವ ಗುತ್ತಿಗೆದಾರರಿಗೆ ಕೊಡಲು ಆದ್ಯತೆ ಕೊಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಳ್ಳಿಮನಿಯವರು ಸರ್ಕಾರದಿಂದ ಬರುವ ಕೆಲಸಗಳನ್ನು ಸ್ಥಳೀಯ ಗುತ್ತಿಗೆದಾರಿಗೆ ಕೊಡಲಾಗುವುದು ನಿಗದಿತ ಅವಧಿಯಲ್ಲಿ ಕೆಲಸ ನಿರ್ವಹಿಸಿ ಇಲಾಖೆಗೆ ಸ್ಪಂಧಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆಯ ಸಹಾಯಕ ಇಂಜಿನಿಯರ್ ವಿನೂತ.ಎಸ್. ಸಹಾಯಕ ಲೆಕ್ಕಾಧಿಕಾರಿ ಮಂಜುನಾಥ್ ಗುತ್ತಿಗೆದಾರ, ಸಂಘದ ತಾಲೂಕಾಧ್ಯಕ್ಷ ಎನ್.ಎಸ್.ಹಿರೇಮಠ, ಶಿವರಾಜ ಮುದುಕಪ್ಪ ಹೊನ್ನಳ್ಳಿ ಕೇಟಿ ಪಾಟೀಲ್ ಸುರೇಶ್ ಬಿಸ್ನಳ್ಳಿ ಇನ್ನು ಹಲವಾರು ಗುತ್ತಿಗೆದಾರರು ಅಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 