ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದ ಮರಿಸ್ಚಾಮಿಗೆ ಸನ್ಮಾನ
Tribute to Marishchami who won the co-operative society elections
ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದ ಮರಿಸ್ಚಾಮಿಗೆ ಸನ್ಮಾನ
ಕಂಪ್ಲಿ01: ಸಮೀಪದ ದರೋಜಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಜರುಗಿತು.ಇಲ್ಲಿ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿಯ ಒಂದು ಸ್ಥಾನಕ್ಕೆ ಜಿದ್ದಾಜಿದ್ದಿನಿಂದ ಕೂಡಿತ್ತು. ಮತದಾನ ಪ್ರಕ್ರಿಯೆ ನಡೆಯಿತು. ಸರದಿ ಸಾಲಿನಲ್ಲಿ ನಿಂತು ಜನರು ಮತದಾನ ಮಾಡಿದರು. ಒಟ್ಟು 843 ಮತಗಳ ಪೈಕಿ, 618 ಮತಗಳನ್ನು ಹಾಕಿದ್ದು, 16 ಮತಗಳು ತಿರಸ್ಕೃತಗೊಂಡಿವೆ. ನಂತರದ ಫಲಿತಾಂಶದಲ್ಲಿ ಮರಿಸ್ವಾಮಿ ಅವರು 353 ಮತಗಳೊಂದಿಗೆ ಪ್ರತಿ ಸ್ಪರ್ಧಿ ಹನುಮಂತಪ್ಪ(249) ವಿರುದ್ಧ 104 ಮತಗಳ ಅಂತರದಲ್ಲಿ ಜಯಶಾಲಿಯಾಗಿ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ ಎಂದು ರಿಟನಿಂರ್ಗ್ ಅಧಿಕಾರಿ ಗಂಗಾಧರ ಘೋಷಿಸಿದರು. ತದನಂತರ ಚುನಾವಣೆ ಪ್ರಕ್ರಿಯೆಯಲ್ಲಿ ನಿರ್ದೇಶಕರಾದ ಎನ್.ಮರಿಸ್ವಾಮಿ ಹಾಗೂ ಅವಿರೋಧವಾಗಿ ಆಯ್ಕೆಗೊಂಡ ನಿರ್ದೇಶಕರಾದ ಡಿ.ವಿ.ಮಂಜುನಾಥ, ಡಿ.ಶ್ರೀನಿವಾಸಲು, ಹೆಚ್.ದಾನಪ್ಪ, ಎನ್.ವಿ.ಹನುಮಂತ, ಮಜ್ಜಿಗಿ ನಾಗಮ್ಮ, ಕೆ.ರಾಮಾಂಜಿನೇಯಲು, ಕೆ.ತಿಮ್ಮಯ್ಯ, ಶೋಭಾದೇವಿ, ಪಿ.ಎಸ್.ಲಿಂಗಪ್ಪ, ಎಸ್.ವೆಂಕಟೇಶ, ಮಸೀದಿ ವಲಿ ಇವರಿಗೆ ಮಾಲಾರೆ್ಣಯೊಂದಿಗೆ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ವಿ.ಜನಾರ್ದನ, ತಾಪಂ ಮಾಜಿ ಉಪಾಧ್ಯಕ್ಷ ಕೆ.ಮಾರೆಪ್ಪ, ಮಾಜಿ ಅಧ್ಯಕ್ಷ ಭೀಮಪ್ಪ, ಅಂಬಣ್ಣ, ವಲಿಸಾಬ್, ಯುಸೂಪ್, ಕೆ.ಮಲ್ಲಿಕಾರ್ಜುನ, ಸದ್ದಾಂ, ರವಿ ಪ್ರಕಾಶ, ಎಂ.ರಾಮು, ವೆಂಕಟೇಶ ಸೇರಿದಂತೆ ಅನೇಕರಿದ್ದರು.ಜ02ದರೋಜಿಯಲ್ಲಿ ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದ ಮರಿಸ್ವಾಮಿಗೆ ಮಾಲಾರೆ್ಣ ಮಾಡಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 