ಸಂಜಯಕುಮಾರ ಬಿರಾದಾರಗೆ ಸನ್ಮಾನ
Tribute to Sanjay Kumar's brother
ಸಂಜಯಕುಮಾರ ಬಿರಾದಾರಗೆ ಸನ್ಮಾನ
ಧಾರವಾಡ 26: ಇತ್ತೀಚಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಮೈ ಭಾರತ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿಯನ್ನು ಪಡೆದಿರುವ ಸಂಜಯಕುಮಾರ ಬಿರಾದಾರ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಅನೇಕ ಗಣ್ಯರು ಹೃದಯಸ್ಪರ್ಶಿಯಾಗಿ ಸನ್ಮಾನಿಸಿದರು.
ಕೇಂದ್ರ ಸಚಿವರಾದ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ, ಹುಬ್ಬಳ್ಳಿ ಧಾರವಾಡ ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ಅನೇಕರು ಹೃದಯ ಸ್ಪರ್ಶಿಯಾಗಿ ಸನ್ಮಾನಿಸಿದರು.ಸಮಾಜ ಸೇವೆ, ಯುವ ಜನ ಸಂಘಟನೆಯಲ್ಲಿ ಕ್ರೀಯಾಶೀಲವಾಗಿ ತೊಡಗಿಸಿಕೊಂಡಿರುವ ಸಂಜಯಕುಮಾರ ಬಿರಾದಾರ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ದೊರಕಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದರು.ಇದೇ ರೀತಿ ನಿಮ್ಮ ಸಾಧನೆಯ ಪರ್ವ ಮುಂದುವರೆಯಲಿ, ರಾಜ್ಯದ ಕೀರ್ತಿ ಇನ್ನಷ್ಟೂ ಹೆಚ್ಚಿಸಿ, ಸೇವೆಯನ್ನು ಉಸಿರಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಈ ವೇಳೆ ಸಂಜಯಕುಮಾರ ಬಿರಾದಾರ ತಮಗೆ ಬಂದ ಮಾಯ್ ಭಾರತ ಎನ್ಎಸ್ಎಸ್ ಪದಕ, ಪ್ರಮಾಣಪತ್ರಗಳನ್ನು ಎಲ್ಲ ಗಣ್ಯರಿಗೆ ತೋರಿಸಿ ಅವರಿಂದ ಆಶೀರ್ವಾದ ಪಡೆದರು. ಎಲ್ಲರ ಆಶೀರ್ವಾದ ಬಲ, ತಂದೆತಾಯಿಯರ, ಗುರು ಹಿರಿಯರ ಅನುಗ್ರಹದಿಂದ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ, ಇನ್ನಷ್ಟು ಸೇವೆ ಮಾಡಲು ಈ ಪ್ರಶಸ್ತಿ ಪ್ರೇರಣೆಯಾಗಿದೆ, ನಿಮ್ಮೆಲ್ಲರ ಮಾರ್ಗದರ್ಶನ ನನ್ನ ಮೇಲಿರಲಿ ಎಂದು ಸಂಜಯಕುಮಾರ ತಾವು ಭೇಟಿ ಮಾಡಿದ ಪ್ರತಿಯೊಬ್ಬ ಗಣ್ಯರಿಂದ ಆಶೀರ್ವಾದ ಪಡೆದುಕೊಂಡರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 