ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ
Tribute to senior newspaper distributors
ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ
ಗದಗ 07 : ತಾಲೂಕಿನ ನರಸಾಪೂರ ಗ್ರಾಮದ ಜಗದ್ಗುರು ಮುಂಡರಗಿ ಅನ್ನದಾನೇಶ್ವರ ಶಾಖಾ ಮಠದಲ್ಲಿ ಗದಗ ಜಿಲ್ಲಾ ಪತ್ರಿಕಾ ವಿತರಕರ ಸಂಘದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಿತು.
ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಣೆಯಲ್ಲಿ ತೊಡಗಿಕೊಂಡಿರುವ ಸಂಘದ ಹಿರಿಯರಾದ ಕಲ್ಲಯ್ಯ ಎಸ್. ಹಿರೇಮಠ ಹಾಗೂ ಗಂಗಾಧರ ಮಡ್ಡಿ ಅವರನ್ನು ಸನ್ಮಾನಿಸಲಾಯಿತು.
ಮುಂಡರಗಿ ಅನ್ನದಾನೇಶ್ವರ ಶಾಖಾ ಮಠದ ವೀರೇಶ್ವರ ಸ್ವಾಮೀಜಿ, ಬನ್ನಿಕೊಪ್ಪ ಬ್ರಹನ್ಮಠ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಜಿಗೆರಿ-ವೆಂಕಾಟಾಪುರದ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದ್ರಿಮೋತಿ, ಜಿಲ್ಲಾ ಅಧ್ಯಕ್ಷ ವೀರಬಸಯ್ಯ ವೀರಕ್ತಮಠ, ಸಂಘದ ಶಂಕರಗುರು ಕಂದಗಲ್ಲ, ಸಿದ್ದರಾಮೇಶ್ವರ ಮಡಿವಾಳರ, ಕಿರಣ ಮದ್ಲಿ, ಕರಿಯಪ್ಪ ಗಾಣಿಗೇರ, ಮಂಜುನಾಥ ಕಬನೂರ ಹಾಗೂ ಸಂಘದ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 