ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ಸನ್ಮಾನ
Tribute to the new Chancellor Prof. Vijaya Korishetti
ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ಸನ್ಮಾನ
ಸಿಂದಗಿ 11: ಎಲ್ಲ ರಂಗದಲ್ಲಿ ಹೆಣ್ಣು ಮಕ್ಕಳು ಮುಂದುವರೆತ್ತಿದ್ದಾರೆ ಅವರನ್ನು ಗೌರವಿಸುವುದು ಮಠ-ಮಾನ್ಯಗಳ ಕರ್ತವ್ಯವಾಗಿದೆ. ಉತ್ತರ ಕರ್ನಾಟಕದ ನಮ್ಮ ಜಿಲ್ಲೆಯ ಹೆಣ್ಣು ಮಗಳಿಗೆ ಕುಲಪತಿ ಆಗುವ ಅವಕಾಶ ದೊರತದ್ದು ಸಂತಸ ತಂದಿದೆ ಎಂದು ಯಂಕಂಚಿ ಕುಂಟೋಜಿ ಹಿರೇಮಠದ ಪೀಠಾಧಿಪತಿ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ತಾಲೂಕಿನ ಯಂಕಂಚಿ ಕುಂಟೋಜಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಇತ್ತೀಚಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಗೆ 6ನೆಯ ನೂತನ ಕುಲಪತಿಯಾಗಿ ನೇಮಕಗೊಂಡ ಪ್ರೊ.ವಿಜಯಾ ಕೋರಿಶೆಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದರು.
ಸನ್ಮಾನವನ್ನು ಸ್ವೀಕರಿಸಿದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಹರ ಗುರು ಚರಮೂರ್ತಿಗಳ ಆಶೀರ್ವಾದದಿಂದ ವಿಶ್ವವಿದ್ಯಾಲಯವು ಸಮಗ್ರ ಅಭಿವೃದ್ಧಿ ಹೊಂದಲಿ ಎನ್ನುವುದೇ ನನ್ನ ಮಹದಾಸೆಯಾಗಿದೆ. ಸದಾ ಕಾಲ ತಮ್ಮ ಆಶೀರ್ವಾದ, ಮಾರ್ಗದರ್ಶನ ನಮ್ಮ ಮೇಲಿರಲಿ ಎಂದರು.ಈ ಸಂದರ್ಭದಲ್ಲಿ ತನಸಹಳ್ಳಿ ಶ್ರೀಮಠದ ಚರಂತೇಶ್ವರ ಶಿವಾಚಾರ್ಯರು, ಮಹಿಳಾ ವಿವಿಯ ಡಾ.ರಾಜಕುಮಾರ ಮಾಲಿಪಾಟೀಲ, ವಿಜಯಕುಮಾರ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 