ನೇತಾಜಿ ಸುಭಾಸ ಚಂದ್ರ ಭೋಸ್ ಅವರ ಭಾವಚಿತ್ರಕ್ಕೆ ನಮನ
Tribute to the portrait of Netaji Subhas Chandra Bose
ಹಾವೇರಿ 23 : ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ವತಿಯಿಂದ ನೇತಾಜಿ ಸುಭಾಷ ಚಂದ್ರ ಭೋಸ್ ಅವರ ಜಯಂತಿಯನ್ನು ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರ ನೇತೃತ್ವದಲ್ಲಿ ಆಚರಿಸಲಾಯಿತು.
ನೇತಾಜಿ ಸುಭಾಸ ಚಂದ್ರ ಭೋಸ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರು ಮಾತನಾಡಿ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದಿಟ್ಟ ವೀರನಾಗಿ ಕೆಚ್ಚೆದೆಯ ಹೋರಾಟ ಮಾಡುತ್ತಾ ಭಾರತ ಮಾತೆಯನ್ನು ಬ್ರಿಟಿಷರಿಂದ ಮುಕ್ತ ಮಾಡಲು ನಿರಂತರವಾಗಿ ಸುಭಾಷ್ ಚಂದ್ರ ಭೋಸ್ ಅವರು ಹೋರಾಟ ಮಾಡಿದ್ದಾರೆ.ಭಾರತೀಯ ರಾಷ್ಟ್ರೀಯ ಸೇನೆಯ ಮೂಲಕ ಯುವಕರನ್ನು ಭಾರತ ಮಾತೆಯ ಸೇವೆ ಮಾಡಲು ಪ್ರೇರೆಪಿಸಿದರು.
ರಾಷ್ಟ್ರ ನಿರ್ಮಾಣ ಮಾಡುವ ಇವರ ಪ್ರಯತ್ನ ಎಲ್ಲರನ್ನು ಬೆರಗುಗೊಳಿಸುವಂತದಾಗಿದೆ.ವಿದ್ಯಾರ್ಥಿಗಳು ಹಾಗೂ ಯುವಕರು ಸುಭಾಷ ಚಂದ್ರ ಭೋಸ್ ಅವರ ಜೀವನ ಪುಸ್ತಕಗಳನ್ನು ಓದುವ ಮೂಲಕ ದೇಶಪ್ರೇಮ ಬೆಳಿಸಿಕೊಳ್ಳಬೇಕು.ಭೋಸ್ ಅವರ ದೇಶಪ್ರೇಮ ಎಲ್ಲರಿಗೂ ಮಾದರಿಯಾಗಿದ್ದು,ಅವರ ಜೀವನದ ಹೋರಾಟ ನಮಗೆ ಸ್ಪೂರ್ತಿಯಾಗಲಿ ಎಂದು ಉಡಡಪ್ಪ ಮಾಳಗಿ ಹೇಳಿದರು.
ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಮಖಬೂಲ್ ಎಂ.ಕೆ.ಶೆಟ್ಟಿ ವಿಭೂತಿ, ಮಾಲತೇಶ ಯಲ್ಲಾಪುರ,ಸುಭಾಸ ಚವ್ಹಾಣ,ಗದಿಗೆಪ್ಪಗೌಡ ನೆಲೂಗಲ್,ಮೃತ್ಯಂಜಯ್ಯ ಮುಷ್ಠಿ,ಮರಿಯಪ್ಪ ನಡುವಿನಮನಿ,ಜಗದೀಶ ಹರಿಜನ,ರವಿ ದಂಡಿನ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 