ಇಬ್ರಾಹಿಂ ಸಾಬ್ ಬಿಸರಳ್ಳಿ, ಹೊನ್ನೂರು ಸಾಬ್ ಬೈರಾಪುರ ರಿಗೆ ಸನ್ಮಾನ
Tributes to Ibrahim Saab Bisaralli and Honnur Saab Bairapur
ಭಾಗ್ಯನಗರ 12 : ಪಟ್ಟಣ ಪಂಚಾಯತ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೊನ್ನೂರು ಸಾಬ್ ಬೈರಾಪುರ ಹಾಗೂ ವಕೀಲರಾಗಿ 27 ವರ್ಷಗಳನ್ನು ಪೂರೈಸಿರುವ ಭಾಗ್ಯನಗರ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷರಾದ ಇಬ್ರಾಹಿಂ ಸಾಬ್ ಬಿಸರಳ್ಳಿ ಇವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ , ಸತತವಾಗಿ ಮೂರು ಸಲ ಸದಸ್ಯರಾಗಿ ಆಯ್ಕೆಯಾಗಿರುವ ಬೈರಾಪುರ ಪ್ರಸ್ತುತ ಪಟ್ಟಣ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾಗ್ಯನಗರದ ಪಟ್ಟಣ ಪಂಚಾಯತ್ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ವಕೀಲರಾಗಿ 27 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಭಾಗ್ಯನಗರ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷರಾದ ಇಬ್ರಾಹಿಂಸಾಬ್ ಬಿಸರಳ್ಳಿ ಇವರಿಗೆ ಭಾಗ್ಯನಗರದ ಮುಸ್ಲಿಂ ಬಾಂಧವರ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿಉಪಾಧ್ಯಕ್ಷ ಮೌಲಾಹುಸೇನ ಹಣಗಿ, ಮೆಹಬೂಬಸಾಬ ಬಳಿಗಾರ, ರಶೀದ್ಸಾಬ್, ಹಾಜಿ ಕುತ್ಬುದ್ದೀನಸಾಬ್, ಬಾಬಾ ಪಟೇಲ್, ಶರೀಫಸಾಬ ಪಿಂಜಾರ, ಮೆಹಬೂಬ ಹಣಗಿ, ಮರ್ದಾನಸಾಬ ಹಿರೆಮಸೂತಿ, ನೂರಬಾಷಾ , ಕಬೀರಸಾಬ ಬೈರಾಪೂರ, ಅಮೀನ್ ಸಾಬ್ ಸೂಡಿ, ಮಹ್ಮದ್ ಸಾಬ್ ಬೈರಾಪುರ ಹಾಗೂ ಮೆಹಬೂಬಸಾಬ ಕೊತ್ವಾಲ, ಶಾಕೀರ್ ನದಾಪ, ಹಾಜಿ ಅತ್ತಾರ ಸಾಬ್, ಮಹ್ಮದ್ ರಫಿ ಬೈರಾಪೂರ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 