ಭೂ ಗ್ಯಾರಂಟಿ ಸಮರಾ್ಣ ಸಮಾವೇಶಕ್ಕೆ ಎರಡು ಲಕ್ಷ ಜನರು ಬರಲಿವ ನೀರೀಕ್ಷೆ
Two lakh people expected to attend land guarantee protest rally
ಹಾವೇರಿ 12 :ನಗರದಲ್ಲಿ ಜರುಗುವ ಭೂ ಗ್ಯಾರಂಟಿ ಸಮರಾ್ಣ ಸಮಾವೇಶಕ್ಕೆ ಎರಡು ಲಕ್ಷ ಜನರು ಬರಲಿವ ನೀರೀಕ್ಷೆ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಈ ಸಮಾವೇಶದಲ್ಲಿ ಒಂದು ಲಕ್ಷ ಹತ್ತು ಸಾವಿರ ಭೂ ದಾಖಲೆಗಳ ಪಟ್ಟಾವನ್ನು ಪಲಾನುಭವಿಗಳಿಗೆ ನೀಡಲಾಗುತ್ತದೆ.ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ,ಕಂದಾಯ ಸಚಿವರಾದ ಕೃಷ್ಣಾ ಬೈರೇಗೌಡ,ಉಸ್ತುವಾರಿ ಸಚಿವ ಶಿವಾನಂದ ಪಾಟೀಲ,ಇನ್ನಿತರ ಸಚಿವರು,ಶಾಸಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಏಳು-ಎಂಟು ಜಿಲ್ಲೆಯಿಂದ ಪಲಾನುಭವಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಎರಡು ಲಕ್ಷ ಜನ ಬರುವ ನೀರೀಕ್ಷೆ ಇದೆ.ನುಡಿದಂತೆ ನಡೆದಿದ್ದೇವೆ.ನಮ್ಮ ಸರ್ಕಾರ ಈವರಿಗೆ ಎರಡು ಲಕ್ಷ ಇಪತ್ತೊಂದು ಸಾವಿರ ಪಟ್ಟಾ ನೀಡಿದೆ.ನಮ್ರತೆಯಿಂದ ಕೆಲಸ ಮಾಡುತ್ತೇವೆ.ಐದು ಗ್ಯಾರಂಟಿ ಜಾರಿಗೊಳಿಸಲಾಗಿದೆ.ಬಿಜೆಪಿಯವರು ಜನರಿಗೆ ಮೋಸ ಮಾಡಿದ್ದಾರೆ ಎಂದರು.ನಾಡಿನ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಬಜೆಟ್ ಅವರು ನೀಡಲಿದ್ದಾರೆ ಎಂದು ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದರು.
ಲೋಕಸಭೆಯಲ್ಲಿ ಜನರ ಪರವಾಗಿ ಕೆಲಸ ಹಾಗೂ ಧ್ವನಿ ಎತ್ತುವ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಸ್ಪೀಕರ್ ಮಾತನಾಡಲು ಅವಕಾಶ ನೀಡದೇ ಇರುವುದು ಖಂಡನೀಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಸದನದಲ್ಲಿ ವಿಚಾರ ಮಂಡನೆ ಮಾಡಲು ಸಂವಿಧಾನಾತ್ಮಕ ಅವಕಾಶಗಳು ಇರುತ್ತೇವೆ. ಸ್ಪೀಕರ್ ಪಕ್ಷಪಾತ ಮಾಡಬಾರದು.
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರನ್ನು ಅಮಾನತು ಮಾಡಿದ್ದಾರೆ.ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಲಿದ್ದಾರಾ ? ದೇಶದ ಪರವಾಗಿ ಧ್ವನಿ ಎತ್ತುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಚರ್ಚೆಗೆ ಅವಕಾಶ ನೀಡಬೇಕು.ರಾಹುಲ್ ಗಾಂಧಿ ಅವರು ನಿರಂತರವಾಗಿ ಜನಪರ ಹೋರಾಟ ಮಾಡುತ್ತಿದ್ದಾರೆ ಎಂದು ಲೋಕಸಭೆಯ ಸ್ಪೀಕರ್ ನಡೆಯನ್ನು ಸಲೀಂ ಅಹ್ಮದ್ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಸಭಾ ಉಪಸಭಾಧ್ಯಕ್ಷರಾದ ರುದ್ರ್ಪ ಲಮಾಣಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಫ್.ಎನ್ ಗಾಜೀಗೌಡ್ರ,ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ,ಜಿಲ್ಲಾ ವಕ್ತಾರರಾದ ಡಾ.ಸಂಜಯ ಡಾಂಗೆ,ಬಸವರಾಜ ಹೆಡಿಗೊಂಡ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 