ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ
UPSC success of a shepherd's son
ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ
ಯರಗಟ್ಟಿ 23: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ - ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನೀರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರಾ್ಯಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮೆರೆದಿದ್ದಾರೆ. ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲ. ಅಲ್ಲದೇ ಇಡೀ ಊರಿಗೆ ಊರೇ ಹನುಮಂತನ ಸಾಧನೆಗೆ ಹೆಮ್ಮೆ ಪಡುತ್ತಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 