ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ
UPSC success of a shepherd's son
ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ
ಯರಗಟ್ಟಿ 23: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ - ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನೀರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರಾ್ಯಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮೆರೆದಿದ್ದಾರೆ. ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲ. ಅಲ್ಲದೇ ಇಡೀ ಊರಿಗೆ ಊರೇ ಹನುಮಂತನ ಸಾಧನೆಗೆ ಹೆಮ್ಮೆ ಪಡುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 