ಉರ್ದು ಪ್ರೌಢಶಾಲೆಯನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಿದ
Urdu High School upgraded to Maulana Azad Public School
ಹಾನಗಲ್ 19: :ತಾಲೂಕಿನ ಅಕ್ಕಿಆಲೂರಿನ ಸರಕಾರಿ ಉರ್ದು ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಭೂ ನ್ಯಾಯ ಮಂಡಳಿ ಸದಸ್ಯ ಯಾಸೀರ್ಅರಾಫತ್ ಮಕಾನದಾರ ಮಾತನಾಡಿ, ಕಳೆದ 3-4 ವರ್ಷಗಳಲ್ಲಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಕಾಣಲಾಗಿದೆ. ಅಕ್ಕಿಆಲೂರಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭಿಸಬೇಕು ಎನ್ನುವ ಬೇಡಿಕೆ ಹತ್ತಾರು ವರ್ಷಗಳಿಂದ ಕೇಳಿ ಬರುತ್ತಿತ್ತು. ಇದೀಗ ಶಾಲೆ ಮೇಲ್ದರ್ಜೆಗೇರಿರುವುದರಿಂದ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಉರ್ದು ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಸಿಗಲಿದೆ. ಶಾಸಕ ಶ್ರೀನಿವಾಸ ಮಾನೆ ಅವರ ಪ್ರಯತ್ನದ ಫಲದಿಂದ ಸುತ್ತಲಿನ ಹತ್ತು, ಹಲವು ಗ್ರಾಮಗಳ ಸಹಸ್ರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಅಂಜುಮನ್ ಅಧ್ಯಕ್ಷ ಮೆಹಬೂಬ ಬ್ಯಾಡಗಿ ಮಾತನಾಡಿ ತಾಲೂಕಿನಲ್ಲಿ ಸಮುದಾಯ ಮತ್ತು ಶಾಸಕರ ಸಹಭಾಗಿತ್ವದ 50ಅ:50ಅ ಯೋಜನೆ ರಾಜ್ಯದ ಗಮನ ಸೆಳೆದಿದೆ. ಸಮುದಾಯ ವಂತಿಗೆ ರೂಪದಲ್ಲಿ ಸೇರಿಸುವ ಹಣಕ್ಕೆ ಸಮನಾಗಿ ಶಾಸಕ ಶ್ರೀನಿವಾಸ ಮಾನೆ ಅವರು ವೈಯಕ್ತಿಕ ಹಣ ನೀಡಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿರುವುದು ಮಾದರಿ ಯೋಜನೆ ಎಂದರು. ಗ್ರಾಪಂ ಅಧ್ಯಕ್ಷ ಮಕ್ಬೂಲ್ಅಹ್ಮದ್ ರುಸ್ತುಂಖಾನವರ, ಎಸ್ಡಿಎಂಸಿ ಅಧ್ಯಕ್ಷ ಸಾಧಿಕ್ ಹಸನಬಾದಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಸತ್ತಾರಸಾಬ ಅರಳೇಶ್ವರ, ಖ್ವಾಜಾಮೊಹಿದ್ದೀನ್ ಅಣ್ಣಿಗೇರಿ, ಭರಮಣ್ಣ ಶಿವೂರ, ಗೀತಾ ಪೂಜಾರ, ರಜಿಯಾ ಹಿತ್ತಲಮನಿ, ನಸರುಲ್ಲಾ ಶಿರಹಟ್ಟಿ, ಇನಾಯತ್ ಪಠಾಣ, ಮಹಾಂತೇಶ ಮಲಗುಂದ, ಅಬ್ದುಲ್ಕರೀಂ ಹಿತ್ತಲಮನಿ, ಇಂದೂಧರ ಸಾಲಿಮಠ, ಅಮೀರಸಾಬ ನೆಲವಿಗಿ, ಅಲ್ತಾಫ್ ಶಿರಹಟ್ಟಿ, ಹಿದಾಯತ್ ಮಿಠಾಯಿಗಾರ ಸೇರಿದಂತೆ ಗ್ರಾಪಂ ಮತ್ತು ಎಸ್ಡಿಎಂಸಿ ಸದಸ್ಯರು, ಪಾಲಕರು, ಶಿಕ್ಷಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 