ಗಂಗಾಮತಸ್ಥರ ಎಸ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ
Urge central government to add Gangamatshara to ST
ಗಂಗಾಮತಸ್ಥರ ಎಸ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ
ಕಂಪ್ಲಿ 04: ಕರ್ನಾಟಕ ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಆಯ್ಕೆಗೊಂಡ ಎನ್.ರವಿಕುಮಾರ್ ಅವರನ್ನು ರಾಜ್ಯ ಗಂಗಾಮತಸ್ಥರ ಸಂಘದ ನಿಕಟಪೂರ್ವ ಪದಾಧಿಕಾರಿಗಳು ಮಂಗಳವಾರ ಬೆಂಗಳೂರಿನಲ್ಲಿ ಸನ್ಮಾನಿಸಿ, ಮನವಿ ಸಲ್ಲಿಸಿದರು. ನಂತರ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷ ಮಣ್ಣೂರು ನಾಗರಾಜ ಮಾತನಾಡಿ, ಎನ್.ರವಿಕುಮಾರ್ ಗಂಗಾಮತ ಸಮಾಜದ ಶಕ್ತಿಯಾಗಿದ್ದಾರೆ ಅರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕ ಹಿಂದುಳಿದ ಸಮುದಾಯವಾಗಿದ್ದು ಬೆಸ್ತರು ಕೋಲಿ, ಕಬ್ಬಲಿಗ, ಬಾರಿಕ ಅಂಬಿಗ, ಮೊಗವೀರರು ಆರು ಜಾತಿಗಳು ಎಸ್ಟಿಗೆ ಸೇರಿಸುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೂ ಈತನಕವೂ ಸೇರಲಾಗಿಲ್ಲ. ಸುಮಾರು ವರ್ಷಗಳ ಹೋರಾಟ ಮಾಡುತ್ತ ಬಂದರೂ ಸಹ ಇವತ್ತಿನವರೆಗೂ ಪರಿಶಿಷ್ಟ ಪಂಗಡಕ್ಕೆ ಸೇರೆ್ಡ ಮಾಡಿಲ್ಲ ತಾವುಗಳು ಅಧಿವೇಶನದಲ್ಲಿ ಧ್ವನಿ ಎತ್ತುವ ಮೂಲಕ ಎಸ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು.
ಇದರ ಜೊತೆಗೆ ನಿಜಶರಣ ಅಂಬಿಗರ ಚೌಡಯ್ಯನವರ ನಿಗಮಕ್ಕೆ 100ಕೋಟಿ ರೂಪಾಯಿಗಳ ಅನುದಾನ ಒದಗಿಸುವಂತೆ, ಮನವಿ ಮಾಡಿದರು ರಾಜ್ಯ ಗಂಗಾಮತಸ್ಥರ ಸಂಘದ ನಿಕಟಪೂರ್ವ ರಾಜ್ಯ ಅಧ್ಯಕ್ಷ ಬಿ.ಮೌಲಾಲಿ, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಕರೇಕಲ್ ಮನೋಹರ ಸೇರಿ ಇತರರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 