ದರ್ಗಾದಲ್ಲಿರುವ ಸೈಯ್ಯದ್ ಮೌಲಾ ಅಲಿ ಮರ್ದಾನ ಏ ಗೈಬ್ ವಲಿ ಅವರ ಉರುಸ್ ಕಾರ್ಯಕ್ರಮ
Urus program of Syed Maula Ali Mardana Ae Ghaib Wali in Dargah
ದರ್ಗಾದಲ್ಲಿರುವ ಸೈಯ್ಯದ್ ಮೌಲಾ ಅಲಿ ಮರ್ದಾನ ಏ ಗೈಬ್ ವಲಿ ಅವರ ಉರುಸ್ ಕಾರ್ಯಕ್ರಮ
ಹಾನಗಲ್ 22 : ಇಲ್ಲಿನ ದರ್ಗಾದಲ್ಲಿರುವ ಸೈಯ್ಯದ್ ಮೌಲಾ ಅಲಿ ಮರ್ದಾನ ಏ ಗೈಬ್ ವಲಿ ಅವರ ಉರುಸ್ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿ, ಚಾದರ ಅರ್ಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಮಾಜದಲ್ಲಿ ಸಾಮರಸ್ಯ ಮೂಡಲಿ ಎನ್ನುವ ಸದುದ್ದೇಶದಿಂದ ನಮ್ಮ ಹಿರಿಯರು ಜಾತ್ರೆ, ಉತ್ಸವ, ಉರುಸು ಆಚರಿಸುತ್ತಾ ಬಂದಿದ್ದಾರೆ. ಇಂಥ ಆಚರಣೆಗಳ ನೆಪದಲ್ಲಿ ನಾವೆಲ್ಲರೂ ಒಂದೆಡೆ ಸೇರಿ, ಪರಸ್ಪರ ಬೆರೆಯುವುದರಿಂದ ಬಾಂಧವ್ಯ ಬೆಳೆಯಲಿದೆ. ಇಂದಿಗೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಹಿಂದೂಗಳ ಹಬ್ಬ ಹರಿದಿನಗಳಲ್ಲಿ ಮುಸ್ಲಿಂರು, ಮುಸ್ಲಿಂರ ಉರುಸು, ಮೊಹರಂ ಸೇರಿದಂತೆ ಇತರ ಆಚರಣೆಗಳಲ್ಲಿ ಹಿಂದೂಗಳು ಸಹ ಪಾಲ್ಗೊಂಡು ಸೌಹಾರ್ದತೆ ಮೆರೆಯುತ್ತಿರುವುದನ್ನು ಕಾಣುತ್ತೇವೆ. ಆಧುನಿಕತೆ ಎಷ್ಟೇ ಬೆಳೆದರೂ ಪದ್ಧತಿಗಳು ಮಾತ್ರ ಅಳಿದು ಹೋಗಿಲ್ಲ. ಎಲ್ಲರೂ ಒಂದಾಗಿ ಮಾನವೀಯ ಮೌಲ್ಯಗಳೊಂದಿಗೆ ಮುನ್ನಡೆಯಬೇಕಿದೆ. ಇಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ಮೇಲು, ಕೀಳು ಭಾವನೆ ಮೂಡದಂತೆ ಒಮ್ಮನಸಿನಿಂದ ಜೊತೆಗೂಡಿ ಸಾಗಬೇಕಿದೆ. ಅಂದಾಗ ಮಾತ್ರ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಸಾಮಾಜಿಕ ನೆಮ್ಮದಿ ಮೂಡಲಿದೆ ಎಂದು ಶ್ರೀನಿವಾಸ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಪ್ರಮುಖರಾದ ಮತೀನ್ ಶಿರಬಡಗಿ, ಖುರ್ಷಿದ್ಅಹ್ಮದ್ ಹುಲ್ಲತ್ತಿ, ಮರ್ದಾನಸಾಬ ಬಡಗಿ, ಮುಕ್ತಿಯಾರ್ ಖೇಣಿ, ಸಿಕಂದರ್ ವಾಲಿಕಾರ, ಇಲಿಯಾಸ್ ಮಿಠಾಯಿಗಾರ, ನಿಯಾಜ್ಅಹ್ಮದ್ ಸರ್ವಿಕೇರಿ, ದುದ್ದುಸಾಬ ಅಕ್ಕಿವಳ್ಳಿ, ಗೌಸ್ಮೋದೀನ್ ತಾಂಡೂರ, ಜಾಫರ್ ಬಾಳೂರ, ಖಾಲಿದ್ ಶೇಷಗಿರಿ, ಫೈರೋಜ್ ಶಿರಬಡಗಿ, ನಿಸಾರ್ ಖಾಜಿ, ನಿಸಾರ ಬಡಗಿ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 