ದತ್ತಿ ನಿಧಿ ಕಾರ್ಯಕ್ರಮದಲ್ಲಿ ಮೌಲ್ಯ ಸಂದೇಶ ಮುಂಡಗೋಡ ರೋಟರಿ ಶಾಲೆಯಲ್ಲಿ ಅರ್ಥಪೂರ್ಣ ಆಚರಣೆ
Value message at endowment fund program, meaningful celebration at Mundagoda Rotary School
ಮುಂಡಗೋಡ 22: ಕನ್ನಡ ಸಾಹಿತ್ಯ ಪರಿಷತ್ತು ಮುಂಡಗೋಡ ಘಟಕದ ವತಿಯಿಂದ ರೋಟರಿ ಪ್ರೌಢಶಾಲೆಯಲ್ಲಿ ನೀಲಮ್ಮಗೌಡ್ ಚಾಲಿ ಹಾಗೂ ದಿವಂಗತ ಶಿವನಗೌಡ ಪಾಟೀಲ್ ಅವರ ಸ್ಮರಣಾರ್ಥ ದತ್ತಿ ನಿಧಿ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ವಿ.ಎಸ್. ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆದು ನಾಡು, ನುಡಿಗೆ ಸೇವೆ ಸಲ್ಲಿಸಬೇಕು, ತಂದೆ-ತಾಯಿಯನ್ನು ಗೌರವಿಸಬೇಕು ಎಂದು ತಿಳಿಸಿದರು. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ಸಂಸ್ಕಾರ ಬೆಳೆಸಬೇಕು ಎಂದರು. ಮುಖ್ಯ ಅತಿಥಿಗಳಾದ ಡಾ. ಎಂ.ಸಿ. ಜಂಬಗಿ ಮಾತನಾಡಿ, ದಿವಂಗತ ನೀಲಮ್ಮಗೌಡ್ ಚಾಲಿ ಹಾಗೂ ಶಿವನಗೌಡ ಪಾಟೀಲ್ ಅವರ ಸ್ಮರಣಾರ್ಥ ದತ್ತಿ ನಿಧಿ ಕಾರ್ಯಕ್ರಮವನ್ನು ಪ್ರೌಢಶಾಲೆಯಲ್ಲಿ ಆಯೋಜಿಸಿರುವುದು ಸಂತಸದ ವಿಚಾರ ಎಂದರು. ಅಧ್ಯಕ್ಷತೆ ವಹಿಸಿದ್ದ ಮುಂಡಗೋಡ ಘಟಕದ ಅಧ್ಯಕ್ಷರಾದ ವಸಂತ ಕೊಣಸಾಲಿ ಮಾತನಾಡಿ, “ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಗೆ ಮಾದರಿಯಾಗಿವೆ. ತಂದೆ-ತಾಯಿಯ ಗೌರವವನ್ನು ಉಳಿಸಿಕೊಂಡು ಬೆಳೆಸಬೇಕು.
ದತ್ತಿ ನಿಧಿ ಕಾರ್ಯಕ್ರಮಗಳು ನಮ್ಮ ಪರಿಷತ್ತಿನ ವತಿಯಿಂದ ಪ್ರತಿವರ್ಷವೂ ಆಚರಿಸಿ ಅವರ ನೆನಪನ್ನು ಜೀವಂತವಾಗಿಡುವ ಪ್ರಯತ್ನವಾಗಿದೆ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಗಮನಹರಿಸಿ ಆದರ್ಶ ವಿದ್ಯಾರ್ಥಿಗಳಾಗಬೇಕು. ಮಾತೃಭಾಷೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ” ಎಂದರು. ಕಾರ್ಯಕ್ರಮದಲ್ಲಿ ರೋಟರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಿ.ಎನ್. ಕುಲಕರ್ಣಿ, ಸಂಗಪ್ಪ ಕೊಳೂರು, ಎಸ್. ಬಿ. ಹೂಗಾರ, ಸುಭಾಸ್ ವಡ್ಡರ, ಸಿ. ಎನ್. ಸುರಕೋಡ, ನಾಗರಾಜ ಅರ್ಕಸಾಲಿ, ಎಸ್.ಡಿ. ಮುಡೆಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಸ್ವಾಗತ ಹಾಗೂ ಪ್ರಸ್ತಾವನೆಯನ್ನು ಗೌರವ ಕಾರ್ಯದರ್ಶಿ ಎಸ್.ಡಿ. ಮುಡೆಣ್ಣವರ ನೆರವೇರಿಸಿದರು. ವಂದನಾರೆ್ಣಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು. ಕೊನೆಯಲ್ಲಿ ವಿ.ಎಸ್. ಪಾಟೀಲ್, ಡಾ.ಎಂ.ಸಿ. ಜಂಬಗಿ ಹಾಗೂ ಜಿ.ಎನ್. ಕುಲಕರ್ಣಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 