ಕಾಳಿಕಾದೇವಿ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು
Various religious functions in the temple as part of Kalikadevi Jatra Mahotsava
ಕಾಳಿಕಾದೇವಿ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು
ಮಹಾಲಿಂಗಪುರ 30: ಕಾಳಿಕಾದೇವಿ ತೃತೀಯ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ಫೆಬ್ರವರಿ 4 ರಂದು ಮಂಗಳವಾರ ದೇವಸ್ಥಾನದಲ್ಲಿ ಪ್ರಾತಃಕಾಲ ದೇವಿಗೆ ಅಭಿಷೇಕ ನಡೆಯಲಿದೆ ಎಂದು ವಿಶ್ವಕರ್ಮ ಸಮಾಜ ತಿಳಿಸಿದೆ.
ನಂತರ ಮುಂಜಾನೆ 7ಗಂಟೆಗೆ ಕೆ.ಇ.ಬಿ. ಗಣಪತಿ ದೇವಸ್ಥಾನದಿಂದ ಜವಳಿ ಬಜಾರ ಮಾರ್ಗವಾಗಿ ಕುಂಭ ಸಹಿತ ಆರತಿ ಮೇಳ, ಪುರವಂತರ ಸೇವೆ, ಸಕಲ ಮಂಗಲವಾದ್ಯ, ಮೇಳಗಳೊಂದಿಗೆ ಕಾಳಿಕಾ ದೇವಸ್ಥಾನ ವರೆಗೆ ಶ್ರೀದೇವಿ ಭಾವಚಿತ್ರ ಮೆರವಣಿಗೆ ನಡೆಯುವುದು. ತರುವಾಯ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಅಲ್ಲದೆ ಸೇರಿದ ಸದ್ಭಕ್ತರಿಗೆ ಮಹಾಪ್ರಸಾದ ಜರುಗುವುದು.
ಫೆಬ್ರವರಿ 5 ರಂದು ಬುಧವಾರ ಪ್ರಾತಃಕಾಲ ಅಭಿಷೇಕ, ಹೋಮ, ಹವನ, ಉಚಿತ ಸಾಮೂಹಿಕ ಉಪನಯನ ಮತ್ತು ದೇವಿಯ ಪಲ್ಲಕ್ಕಿ ಸೇವೆ ಕಾರ್ಯಕ್ರಮ ನಡೆಯುವುದು.
ಮನಿಪ್ರ ಜಗದ್ಗುರು ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ವೀರೇಂದ್ರ ಮಹಾಸ್ವಾಮಿಗಳು, ನವಲಗುಂದ ಅಜಾತ ನಾಗಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನೂತನ ಸಭಾ ಮಂಟಪ ಲೋಕಾರೆ್ಣಗೊಳ್ಳಲಿದೆ. ನಂತರ ದಾನಿಗಳಿಗೆ ಸನ್ಮಾನ. ಧಾರ್ಮಿಕ ಸಭೆ, ಆಶೀರ್ವಚನ ಕಾರ್ಯಕ್ರಮ ನಂತರ ಮಹಾಪ್ರಸಾದ ಜರುಗುವುದು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 