ಬಾಲಕಿಗೆ ವಿಷಪೂರಿತ ಹಾವು ಕಡಿತ
ಕಾರವಾರ 30: ವಿಷಪೂರಿತ ಹಾವೊಂದು ಕಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಗುರುವಾರ ಸಾಯಂಕಾಲ ನಡೆದಿದೆ.
ತೇಜು ರೋಹಿದಾಸ ನಾಯ್ಕ (12) ಹಾವು ಕಡಿತಕ್ಕೊಳಗಾದ ಬಾಲಕಿ. ಈಕೆ ಹಟ್ಟಿಕೇರಿಯ ಪ್ರಾಥಮಿಕ ಶಾಲೆಯ ವಿದ್ಯಾಥರ್ಿನಿ. ಗುರುವಾರ ಸಾಯಂಕಾಲ ಮನೆಯಿಂದ ದೇವಸ್ಥಾನಕ್ಕೆ ತೆರಳುತ್ತಿರುವಾಗ ದಾರಿ ಮಧ್ಯದಲ್ಲಿ ಬಾಲಕಿಯ ಕಾಲಿಗೆ ಹಾವು ಕಡಿದಿದೆ. ಆಗ ಬಾಲಕಿಯ ಬೊಬ್ಬೆಗೆ ಕೂಡಲೇ ಸಾರ್ವಜನಿಕರು ಸುತ್ತುವರೆದು ರಸ್ತೆ ಪಕ್ಕದ ಪೊದೆಯೊಂದರಲ್ಲಿದ್ದ ಆ ಹಾವನ್ನು ಜೀವಂತವಾಗಿ ಹಿಡಿದು, ಬಾಲಕಿಯ ಜೊತೆಗೆ ಕಾರವಾರ ವೈದ್ಯಕೀಯ ಕಾಲೇಜಿಗೆ ತಂದಿದ್ದರು.
ಈ ವಿಷಪೂರಿತ ಹಾವು ಆಫ್ರಿಕಾ ಮತ್ತು ಭಾರತ ಸೇರಿದಂತೆ ಕೆಲ ಏಷ್ಯಾಖಂಡದಲ್ಲಿ ಮಾತ್ರ ಕಂಡು ಬರುವ ಅಪರೂಪದ ಹಾವು. ಈ ಹಾವಿನ ಕಡಿತದಿಂದ ಗಾಂಗ್ರಿನ್ಗೊಳಗಾಗುವ ಸಾಧ್ಯತೆ ಹೆಚ್ಚು. ಬಾಲಕಿಗೆ ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಬಾಲಕಿ ಅಪಾಯದಿಂದ ಪಾರಾಗಿದ್ದಾಳೆಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 