ವಿಜಯಪುರ: ಕೆಬಿಜೆಎನ್ಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮನೆಗಳಿಗೆ ನುಗ್ಗಿದ ಕಾಲುವೆ ನೀರು
ಲೋಕದರ್ಶನ ವರದಿ
ವಿಜಯಪುರ 16: ಕೆಬಿಜೆಎನ್ಎಲ್ ಅಧಿಕಾರಿಗಳ ಎಡವಟ್ಟಿನಿಂದ 16ನೇ ವಿತರಣೆ ಕಾಲುವೆಯಲ್ಲಿ ಹರಿಯಬೇಕಿದ್ದ ನೀರು ಬೆಳಗ್ಗೆ ಪಟ್ಟಣದ ಇಳಿಜಾರು ಪ್ರದೇಶದಲ್ಲಿರುವ ಬಸವನಗರದ ಹಲವಾರು ಸಾರ್ವಜನಿಕರ ಮನೆಗಳಿಗೆ ನುಗ್ಗಿದೆ.
ಕೆಲ ದಿನಗಳ ಹಿಂದೆ ಕೃಷ್ಣಾ ಎಡದಂಡೆ ಕಾಲುವೆಯಿಂದ ಆಲಮಟ್ಟಿ ಅಣೆಕಟ್ಟೆಗೆ ನೀರು ಹರಿಸಲಾಗಿತ್ತು. ಆದರೆ ಕಾಲುವೆಯಲ್ಲಿ ಹೂಳು ತುಂಬಿದ ಪರಿಣಾಮ ನೀರು ಮನೆಗಳತ್ತ ಧಾವಿಸಿ ಪೋಲಾಗುತ್ತಿರುವುದಕ್ಕೆ ಹಾಗೂ ಕಾಲುವೆ ದುರಸ್ತಿ ಮಾಡಲು ನಿರ್ಲಕ್ಷೃ ತೋರಿದ ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾಲುವೆ ನೀರಿನ ಸಮಸ್ಯೆ ಕುರಿತು ಹಲವಾರು ಬಾರಿ ಕೆಬಿಜೆಎನ್ಎಲ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮನವಿ ಮಾಡಿದ್ದರೂ ನಿರ್ಲಕ್ಷೃ ಮಾಡಿದ್ದಾರೆ. ಅಧಿಕಾರಿಗಳು ಇದೇ ರೀತಿ ಬೇಜವಾಬ್ದಾರಿ ಮುಂದುವರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಡಿಎಸ್ಎಸ್ ಸಂಚಾಲಕ ಜೈಭೀಮ ನಾಯ್ಕೋಡಿ ಎಚ್ಚರಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 