ವಿಜಯಪುರ: ವಿವಿಧ ಕಾಲುವೆಗೆ ನೀರು ರೈತರಲ್ಲಿ ಸಂತಸ
ಲೋಕದರ್ಶನ ವರದಿ
ವಿಜಯಪುರ 19: ಮುಳವಾಡ ಏತನೀರಾವರಿ ಯೋಜನೆ ಬಳೂತಿ ಜಾಕವೆಲ್ನಿಂದ ವಿವಿಧ ಕಾಲುವೆಗಳಿಗೆ ನೀರು ಹರಿಯಲು ಆರಂಭಿಸಿದ್ದು, ಬರಗಾಲದಿಂದ ತತ್ತರಿಸಿದ್ದ ರೈತರಲ್ಲಿ ಸಂತಸ ಮೂಡಿಸಿದೆ.
ಅಗ್ನಿ ಆಕಸ್ಮಿಕಕ್ಕೆ ಒಳಗಾಗಿ 5ತಿಂಗಳಿಂದ ದುರಸ್ಥಿಯಲ್ಲಿದ್ದ ಕೃಷ್ಣಾನದಿಯಿಂದ ನೀರೆತ್ತುವ ಬಳೂತಿ ಜಾಕವೆಲ್ ಆರಂಭಗೊಳ್ಳದೆ ಇರುವದರಿಂದ ರೈತರು ಕಂಗಾಲಾಗಿದ್ದರು. ಗೃಹ ಸಚಿವ ಎಂ.ಬಿ.ಪಾಟೀಲ್ರು ಬಳೂತಿ ಜಾಕವೆಲ್ಗೆ ಭೇಟಿ ನೀಡಿ,ತುರ್ತಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿ, ದುರಸ್ಥಿಗೆ ಅಗತ್ಯವಾಗಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು. ಅಲ್ಲದೇ ನಂದವಾಡಗಿ ಏತನೀರಾವರಿ ಯೋಜನೆಗೆ ಅಳವಡಿಸಬೇಕಾಗಿದ್ದ ಕೇಬಲ್ ಸಾಮಗ್ರಿಗಳನ್ನು ಗುತ್ತಿಗೆದಾರರ ಮನವೊಲಿಸಿ, ಬಳೂತಿಗೆ ಸ್ಥಳಾಂತರಿಸಿ, 6ತಿಂಗಳ ಸಮಯಾವಕಾಶ ಕೇಳಿದ್ದ ಅಧಿಕಾರಿಗಳಿಗೆ ಈ ಕಾರ್ಯವನ್ನು 6ವಾರಗಳಲ್ಲಿ ಪೂರ್ಣಗೊಳಿಸಿ, ನೀರು ಹರಿಸಲು ಕಾರಣರಾಗಿದ್ದಾರೆ.
ಬಳೂತಿ, ಹಣಮಾಪುರ ಹಾಗೂ ಮಸೂತಿ ಜಾಕವೆಲ್ಗಳಿಂದ ಮುಳವಾಡ ಏತನೀರಾವರಿ ಪೂರ್ವ, ಪಶ್ಚಿಮ ಹಾಗೂ ಮಲಘಾಣ ಪಶ್ಚಿಮ ಕಾಲುವೆಗೆ ನೀರು ಹರಿಯುತ್ತಿದ್ದು, ರೈತರು ಕಾಲುವೆ ಬಳಿ ತೆರಳಿ, ನೀರನ್ನು ನೋಡಿ ಹಷರ್ೊದ್ಘಾರ ವ್ಯಕ್ತಪಡಿಸುವ ದೃಶ್ಯ ಸಾಮಾನ್ಯವಾಗಿತ್ತು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 