ವಿಜಯಪುರ: ವಿವಿಧ ಕಾಲುವೆಗೆ ನೀರು ರೈತರಲ್ಲಿ ಸಂತಸ
ಲೋಕದರ್ಶನ ವರದಿ
ವಿಜಯಪುರ 19: ಮುಳವಾಡ ಏತನೀರಾವರಿ ಯೋಜನೆ ಬಳೂತಿ ಜಾಕವೆಲ್ನಿಂದ ವಿವಿಧ ಕಾಲುವೆಗಳಿಗೆ ನೀರು ಹರಿಯಲು ಆರಂಭಿಸಿದ್ದು, ಬರಗಾಲದಿಂದ ತತ್ತರಿಸಿದ್ದ ರೈತರಲ್ಲಿ ಸಂತಸ ಮೂಡಿಸಿದೆ.
ಅಗ್ನಿ ಆಕಸ್ಮಿಕಕ್ಕೆ ಒಳಗಾಗಿ 5ತಿಂಗಳಿಂದ ದುರಸ್ಥಿಯಲ್ಲಿದ್ದ ಕೃಷ್ಣಾನದಿಯಿಂದ ನೀರೆತ್ತುವ ಬಳೂತಿ ಜಾಕವೆಲ್ ಆರಂಭಗೊಳ್ಳದೆ ಇರುವದರಿಂದ ರೈತರು ಕಂಗಾಲಾಗಿದ್ದರು. ಗೃಹ ಸಚಿವ ಎಂ.ಬಿ.ಪಾಟೀಲ್ರು ಬಳೂತಿ ಜಾಕವೆಲ್ಗೆ ಭೇಟಿ ನೀಡಿ,ತುರ್ತಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿ, ದುರಸ್ಥಿಗೆ ಅಗತ್ಯವಾಗಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು. ಅಲ್ಲದೇ ನಂದವಾಡಗಿ ಏತನೀರಾವರಿ ಯೋಜನೆಗೆ ಅಳವಡಿಸಬೇಕಾಗಿದ್ದ ಕೇಬಲ್ ಸಾಮಗ್ರಿಗಳನ್ನು ಗುತ್ತಿಗೆದಾರರ ಮನವೊಲಿಸಿ, ಬಳೂತಿಗೆ ಸ್ಥಳಾಂತರಿಸಿ, 6ತಿಂಗಳ ಸಮಯಾವಕಾಶ ಕೇಳಿದ್ದ ಅಧಿಕಾರಿಗಳಿಗೆ ಈ ಕಾರ್ಯವನ್ನು 6ವಾರಗಳಲ್ಲಿ ಪೂರ್ಣಗೊಳಿಸಿ, ನೀರು ಹರಿಸಲು ಕಾರಣರಾಗಿದ್ದಾರೆ.
ಬಳೂತಿ, ಹಣಮಾಪುರ ಹಾಗೂ ಮಸೂತಿ ಜಾಕವೆಲ್ಗಳಿಂದ ಮುಳವಾಡ ಏತನೀರಾವರಿ ಪೂರ್ವ, ಪಶ್ಚಿಮ ಹಾಗೂ ಮಲಘಾಣ ಪಶ್ಚಿಮ ಕಾಲುವೆಗೆ ನೀರು ಹರಿಯುತ್ತಿದ್ದು, ರೈತರು ಕಾಲುವೆ ಬಳಿ ತೆರಳಿ, ನೀರನ್ನು ನೋಡಿ ಹಷರ್ೊದ್ಘಾರ ವ್ಯಕ್ತಪಡಿಸುವ ದೃಶ್ಯ ಸಾಮಾನ್ಯವಾಗಿತ್ತು.
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ 