ವಿಜಯಪುರ: ರಾಜ್ಯ ಗ್ರಾಪಂ ನೌಕರರ 8ನೇ ಸಮ್ಮೇಳನ ಕಾರ್ಯಕ್ರಮ
ಲೋಕದರ್ಶನ ವರದಿ
ವಿಜಯಪುರ 04: ಕನರ್ಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ 8ನೇ ಸಮ್ಮೇಳನವು ಇಂದಿಲ್ಲಿ ವಿಜಯಪುರ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ನಡೆಯಿತು.
ತಾಲೂಕಾ ಪಂಚಾಯತ ಆಡಳಿತಾಧಿಕಾರಿಗಳಾದ ಬಿ.ಎಸ್.ರಾಠೋಡ ಅವರು ಜ್ಯೋತಿ ಬೆಳಗಿಸುವದರೊಂದಿಗೆ ಸಮ್ಮೇಳನ ಪ್ರಾರಂಭವಾಯಿತು.
ಸಮ್ಮೇಳನವನ್ನು ರಾಜ್ಯ ಉಪಾಧ್ಯಕ್ಷರಾದ ಭೀಮಶಿ ಕಲಾದಗಿ ಉದ್ಘಾಟಿಸಿ ಮಾತನಾಡಿ, ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದ ಗ್ರಾ.ಪಂ. ನೌಕರರು ಸಂಘದ ಹೋರಾಟದ ಫಲವಾಗಿ ಇಂದು 14000 ರೂಗಳವರೆಗೆ ವೇತನ ಪಡೆಯಲು ಸಾಧ್ಯವಾಗಿದೆ ಇನ್ನು ಹಲವಾರು ಗ್ರಾ. ಪಂ. ಗಳಲ್ಲಿ ಸರಕಾರ ನಿಗಧಿಗೊಳಿಸಿದ ವೇತನ ನೀಡುತ್ತಿಲ್ಲ. ಸರಕಾರವು ಈ ಬಗ್ಗೆ ಕ್ರಮ ಜರುಗಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮಪರ್ಕವಾಗಿ ಜಾರಿಯಾಗುತ್ತಿಲ್ಲ ಯಂತ್ರಗಳನ್ನು ಹಚ್ಚಿ ಕೆಲಸ ಮಾಡುತ್ತಿದ್ದಾರೆ ಇದನ್ನು ತಡೆಗಟ್ಟಬೇಕು. ಇವಿಎಂ ವೇತನವು ಎಲ್ಲ ಸಿಬ್ಬಂಧಿಗಳಿಗೆ ಸಿಗುವಂತೆ ಆಗಬೇಕು ಎಂದರು.
ಸಿಐಟಿಯು ಜಿಲ್ಲಾ ಕಾರ್ಯದಶರ್ಿ ಲಕ್ಷ್ಮಣ ಹಂದ್ರಾಲ ಜನವಾದಿ ಮಹಿಳಾ ಸಂಘ ರಾಜ್ಯ ಉಪಾಧ್ಯಕ್ಷ ಸುರೇಖಾ ರಜಪೂತ ಶುಭಾಷಯ ಕೋರಿ ಮಾತನಾಡಿದರು. ರಾಜು ಜಾಧವ ಅವರ ಸ್ವಾತದೊಂದಿಗೆ ಪ್ರಾರಂಭವಾದ ಉದ್ಘಾಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ರಂಗಪ್ಪಾ ದಳವಾಯಿ ಅವರ ಒಂದನೆಯೊಂದಿಗೆ ಮುಕ್ತಾಯವಾಯಿತು.
ಇದೇ ಸಂದರ್ಭದಲ್ಲಿ ಗಣ್ಯರಿಗೆ ಶಾಲು ಹೊದಿಸಿ ಹೂ ಹಣ್ಣು ನೀಡುವ ಮೂಲಕ ಸನ್ಮಾಣಿಸಿ ಗೌರವ ಸಲ್ಲಸಿದರು. ಈ ಸಂದರ್ಭದಲ್ಲಿ ಚಂದ್ರಶೇಖರ ವಾಲಿಕಾರ, ಶಿವಶಂಕರ ಯಾಳವಾರ, ದಶರಥ ದಳವಾಯಿ, ಗೋಪಾಲ ರಾಠೋಡ, ಸೋಮಲಿಂಗ ಮಾದರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು 