ಕಾನಿಪ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ವಿನೋದ ಸಾರವಾಡ ಆಯ್ಕೆ

ಕಾನಿಪ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ವಿನೋದ ಸಾರವಾಡ ಆಯ್ಕೆ Vinod Saravada elected as the district secretary of Kanip Sangha

ವಿಜಯಪುರ 10: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯದರ್ಶಿಯಾಗಿ ಪತ್ರಕರ್ತ ವಿನೋದ ಸಾರವಾಡ ಆಯ್ಕೆಯಾಗಿದ್ದಾರೆ. 2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ವಿನೋದ ಸಾರವಾಡ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ಪ್ರಮಾಣ ಪತ್ರ ವಿತರಿಸಿದರು.