ಕೊಡಗಾನೂರ ಗ್ರಾಪಂ ಉಪಾಧ್ಯಕ್ಷರಾಗಿ ವಿರೇಶಗೌಡ ಅವಿರೋಧ ಆಯ್ಕೆ
Viresh Gowda elected unopposed as Kodaganur Gramam Vice President
ಕೊಡಗಾನೂರ ಗ್ರಾಪಂ ಉಪಾಧ್ಯಕ್ಷರಾಗಿ ವಿರೇಶಗೌಡ ಅವಿರೋಧ ಆಯ್ಕೆ
ತಾಳಿಕೋಟಿ: ತಾಲೂಕಿನ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಕೊಡಗಾನೂರ ಗ್ರಾಮ ಪಂಚಾಯತ್ ಇದರ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾರಗನೂರ ಗ್ರಾಮದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೀರೇಶಗೌಡ ಶ್ರೀಮಂತಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ವೀರೇಶಗೌಡ ಪಾಟೀಲ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಚುನಾವಣಾಧಿಕಾರಿಯೂ ಆದ ತಾಪಂ ಇಒ ನಿಂಗಪ್ಪ ಮಸಳಿ ಅವರು ವೀರೇಶಗೌಡ ಶ್ರೀಮಂತಗೌಡ ಪಾಟೀಲ ( ಕಾರಗನೂರ) ಇವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಒಟ್ಟು 21 ಜನ ಸದಸ್ಯ ಬಲ ಹೊಂದಿರುವ ಕೊಡಗಾನೂರ ಗ್ರಾಪಂ ನ ಉಪಾಧ್ಯಕ್ಷರ ಈ ಚುನಾವಣೆಯಲ್ಲಿ 13 ಜನ ಸದಸ್ಯರು ಹಾಜರಿದ್ದು 8 ಜನ ಸದಸ್ಯರು ಗೈರಾಗಿದ್ದರು.ತಾಪಂ ನ ಬಸನಗೌಡ ಚೌದ್ರಿ, ಮಹಾಂತಗೌಡ ದೊರಗೋಳ, ಪಿಡಿಒ ಅನೀಲಕುಮಾರ್ ಕಿರಣಗಿ ಕಾರ್ಯದರ್ಶಿ ಎಚ್.ಜಿ. ಚೌದ್ರಿ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. ವಿಜಯೋತ್ಸವ: ಜೆಡಿಎಸ್ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಸನಗೌಡ ವಣಿಕ್ಯಾಳ, ಮಡು ಸಾಹುಕಾರ ಬಿರಾದಾರ ಇವರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಮಯದಲ್ಲಿ ಗ್ರಾಪಂ ಅಧ್ಯಕ್ಷರಾದ ಶಾಂತಮ್ಮ ಎಂ. ಪಾಟೀಲ, ಮುಖಂಡರಾದ ಶಾಂತಗೌಡ ಇಬ್ರಾಹಿಂಪೂರ,ಪ್ರಭುಗೌಡ ಪಾಟೀಲ (ಲಕ್ಕುಂಡಿ), ಮಲ್ಲನಗೌಡ ಪಾಟೀಲ (ನಾವದಗಿ), ಸಿದ್ದನಗೌಡ ಪಾಟೀಲ ಲಕ್ಕುಂಡಿ, ಹಣಮಂತರಾಯಗೌಡ ವಣಿಕ್ಯಾಳ, ಮಾಜಿ ಅಧ್ಯಕ್ಷ ಬಸನಗೌಡ ಕಿರಸಾಲ ಪಾಟೀಲ,ಮಾಜಿ ಉಪಾಧ್ಯಕ್ಷ ಬಾಬುಗೌಡ ಪಾಟೀಲ,ರಾಜು ಕಟ್ಟಿಮನಿ, ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 