ಕೊಡಗಾನೂರ ಗ್ರಾಪಂ ಉಪಾಧ್ಯಕ್ಷರಾಗಿ ವಿರೇಶಗೌಡ ಅವಿರೋಧ ಆಯ್ಕೆ
Viresh Gowda elected unopposed as Kodaganur Gramam Vice President
ಕೊಡಗಾನೂರ ಗ್ರಾಪಂ ಉಪಾಧ್ಯಕ್ಷರಾಗಿ ವಿರೇಶಗೌಡ ಅವಿರೋಧ ಆಯ್ಕೆ
ತಾಳಿಕೋಟಿ: ತಾಲೂಕಿನ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಕೊಡಗಾನೂರ ಗ್ರಾಮ ಪಂಚಾಯತ್ ಇದರ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾರಗನೂರ ಗ್ರಾಮದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೀರೇಶಗೌಡ ಶ್ರೀಮಂತಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ವೀರೇಶಗೌಡ ಪಾಟೀಲ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಚುನಾವಣಾಧಿಕಾರಿಯೂ ಆದ ತಾಪಂ ಇಒ ನಿಂಗಪ್ಪ ಮಸಳಿ ಅವರು ವೀರೇಶಗೌಡ ಶ್ರೀಮಂತಗೌಡ ಪಾಟೀಲ ( ಕಾರಗನೂರ) ಇವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಒಟ್ಟು 21 ಜನ ಸದಸ್ಯ ಬಲ ಹೊಂದಿರುವ ಕೊಡಗಾನೂರ ಗ್ರಾಪಂ ನ ಉಪಾಧ್ಯಕ್ಷರ ಈ ಚುನಾವಣೆಯಲ್ಲಿ 13 ಜನ ಸದಸ್ಯರು ಹಾಜರಿದ್ದು 8 ಜನ ಸದಸ್ಯರು ಗೈರಾಗಿದ್ದರು.ತಾಪಂ ನ ಬಸನಗೌಡ ಚೌದ್ರಿ, ಮಹಾಂತಗೌಡ ದೊರಗೋಳ, ಪಿಡಿಒ ಅನೀಲಕುಮಾರ್ ಕಿರಣಗಿ ಕಾರ್ಯದರ್ಶಿ ಎಚ್.ಜಿ. ಚೌದ್ರಿ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. ವಿಜಯೋತ್ಸವ: ಜೆಡಿಎಸ್ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಸನಗೌಡ ವಣಿಕ್ಯಾಳ, ಮಡು ಸಾಹುಕಾರ ಬಿರಾದಾರ ಇವರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಮಯದಲ್ಲಿ ಗ್ರಾಪಂ ಅಧ್ಯಕ್ಷರಾದ ಶಾಂತಮ್ಮ ಎಂ. ಪಾಟೀಲ, ಮುಖಂಡರಾದ ಶಾಂತಗೌಡ ಇಬ್ರಾಹಿಂಪೂರ,ಪ್ರಭುಗೌಡ ಪಾಟೀಲ (ಲಕ್ಕುಂಡಿ), ಮಲ್ಲನಗೌಡ ಪಾಟೀಲ (ನಾವದಗಿ), ಸಿದ್ದನಗೌಡ ಪಾಟೀಲ ಲಕ್ಕುಂಡಿ, ಹಣಮಂತರಾಯಗೌಡ ವಣಿಕ್ಯಾಳ, ಮಾಜಿ ಅಧ್ಯಕ್ಷ ಬಸನಗೌಡ ಕಿರಸಾಲ ಪಾಟೀಲ,ಮಾಜಿ ಉಪಾಧ್ಯಕ್ಷ ಬಾಬುಗೌಡ ಪಾಟೀಲ,ರಾಜು ಕಟ್ಟಿಮನಿ, ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 