ವಿವೇಕಾನಂದ ವಿದ್ಯಾ ಸಂಸ್ಥೆಯ ಸೌಹಾರ್ದ ಸಮ್ಮಿಲನ ಸಮಾರಂಭ
Vivekananda Vidya Sanstha's friendly reunion ceremony
ಬೀಳಗಿ 25 : ಬೀಳಗಿ ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ತಾಲೂಕು ಎಂದು ಗುರುತಿಸಲ್ಪಟ್ಟ ನಾಮಪಟ್ಟಿಯನ್ನು ಅಳಿಸಿ, ಶಿಕ್ಷಣದ ಮೂಲಕ ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಿದ ಕೀರ್ತಿ ಎಮ್.ಎನ್.ಪಾಟೀಲರಿಗೆ ಸಲ್ಲುತ್ತದೆ ಎಂದು ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಸಿಬ್ಬಂದಿ ವರ್ಗದ ಸೌಹಾರ್ದ ಸಮ್ಮಿಲನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಸಮಾಜಮುಖಿ ಚಿಂತನೆಯಿಂದ ಮತ್ತು ಶಿಕ್ಷಣಕ್ರಾಂತಿ ಸಾಸಬೇಕೆಂಬ ಸಂಕಲ್ಪದಿಂದ ದೊಡ್ಡ ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಶಿಕ್ಷಕರು ಹಾಗೂ ಸಿಬ್ಬಂದಿಯ ಸಮರೆ್ಣಯಿಂದ ವಿವೇಕಾನಂದ ವಿದ್ಯಾ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ಪ್ರಶಂಸಿಸಿದರು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಮ್.ಎನ್.ಪಾಟೀಲ ಮಾತನಾಡಿ ತಾಲೂಕಿನ ವಿವಿಧ ಮಠಗಳ ಮಠಾಶರನ್ನು ಒಂದೇ ವೇದಿಕೆಯಲ್ಲಿ ಸೇರಿಸುವುದು ನನ್ನ ಆಶಯವಾಗಿತ್ತು. ತಾಲೂಕಿನಲ್ಲಿ ಇದೇ ಮೊದಲ ಪ್ರಯತ್ನವಾಗಿದೆ. ಸಂಸ್ಥೆಯಲ್ಲಿ 180ಕ್ಕೂ ಅಕ ಶಿಕ್ಷಕರು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಬೀಳಗಿ ತನ್ನದೆಯಾದ ಕೊಡುಗೆಯಾಗಿ ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಿಗೆ ಅನೇಕ ಗಣ್ಯರನ್ನು ಕೊಟ್ಟಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 