ವಿವೇಕಾನಂದ ವಿದ್ಯಾ ಸಂಸ್ಥೆಯ ಸೌಹಾರ್ದ ಸಮ್ಮಿಲನ ಸಮಾರಂಭ
Vivekananda Vidya Sanstha's friendly reunion ceremony
ಬೀಳಗಿ 25 : ಬೀಳಗಿ ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ತಾಲೂಕು ಎಂದು ಗುರುತಿಸಲ್ಪಟ್ಟ ನಾಮಪಟ್ಟಿಯನ್ನು ಅಳಿಸಿ, ಶಿಕ್ಷಣದ ಮೂಲಕ ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಿದ ಕೀರ್ತಿ ಎಮ್.ಎನ್.ಪಾಟೀಲರಿಗೆ ಸಲ್ಲುತ್ತದೆ ಎಂದು ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಸಿಬ್ಬಂದಿ ವರ್ಗದ ಸೌಹಾರ್ದ ಸಮ್ಮಿಲನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಸಮಾಜಮುಖಿ ಚಿಂತನೆಯಿಂದ ಮತ್ತು ಶಿಕ್ಷಣಕ್ರಾಂತಿ ಸಾಸಬೇಕೆಂಬ ಸಂಕಲ್ಪದಿಂದ ದೊಡ್ಡ ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಶಿಕ್ಷಕರು ಹಾಗೂ ಸಿಬ್ಬಂದಿಯ ಸಮರೆ್ಣಯಿಂದ ವಿವೇಕಾನಂದ ವಿದ್ಯಾ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ಪ್ರಶಂಸಿಸಿದರು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಮ್.ಎನ್.ಪಾಟೀಲ ಮಾತನಾಡಿ ತಾಲೂಕಿನ ವಿವಿಧ ಮಠಗಳ ಮಠಾಶರನ್ನು ಒಂದೇ ವೇದಿಕೆಯಲ್ಲಿ ಸೇರಿಸುವುದು ನನ್ನ ಆಶಯವಾಗಿತ್ತು. ತಾಲೂಕಿನಲ್ಲಿ ಇದೇ ಮೊದಲ ಪ್ರಯತ್ನವಾಗಿದೆ. ಸಂಸ್ಥೆಯಲ್ಲಿ 180ಕ್ಕೂ ಅಕ ಶಿಕ್ಷಕರು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಬೀಳಗಿ ತನ್ನದೆಯಾದ ಕೊಡುಗೆಯಾಗಿ ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಿಗೆ ಅನೇಕ ಗಣ್ಯರನ್ನು ಕೊಟ್ಟಿದೆ ಎಂದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 