ದಿವಾಳಿತನ ಸಂಹಿತೆ ತಿದ್ದುಪಡಿ ಸುಗ್ರೀವಾಜ್ಞೆಗೆ ಸಂಪುಟ ಅನುಮೋದನೆ
ನವದೆಹಲಿ, ಡಿ 24 - ದಿವಾಳಿತನ ಸಂಹಿತೆ, 2016 ಕ್ಕೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಪ್ರಕಟಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಈ ತಿದ್ದುಪಡಿ 2016ರ ನೀತಿಯಲ್ಲಿನ ಅಡೆತಡೆಗಳನ್ನು ನಿವಾರಿಸುತ್ತದೆ ಮತ್ತು ನೀತಿಯ ಸರಳ ಅನುಷ್ಟಾನವನ್ನು ಖಾತರಿಪಡಿಸುತ್ತದೆ ಎಂದರು.
ಈ ತಿದ್ದುಪಡಿಯಲ್ಲಿ ದಿವಾಳಿತ ನಿರ್ಣಯದ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಕಾರ್ಪೊರೇಟ್ ಸಾಲಗಾರನ ಮಾಡಿರುವ ಅಪರಾಧಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ತಡೆಯುತ್ತದೆ. ಈ ತಿದ್ದುಪಡಿ ದಿವಾಳಿಯಾಗಿರುವ ಸಂಸ್ಥೆಗಳು, ವ್ಯಕ್ತಿಗಳಿಂದ ಸಾಲವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಕೂಡ ಸರಳವಾಗಿಸುತ್ತದೆ. ಈ ನಿರ್ಣಯ ಸಂಸ್ಥೆಯ ಆಡಳಿತವನ್ನು ಬದಲಿಸಿದರೆ, ಅದನ್ನು ಪರಿಗಣಿಸಿ ಕ್ರಮ ಕೈಗೊಳ್ಳಲು ಅನುವು ಮಾಡಿಕೊಡುತ್ತದೆ ಎಂದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 