ರಾಷ್ಟ್ರದ ಪ್ರಗತಿಗಾಗಿ ಕಡ್ಡಾಯವಾಗಿ ಮತದಾನ ಮಾಡಿ: ಕೊಣ್ಣೂರ
ಕಡಬಿ 02: ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಬೇಕು. ದೇಶದ ಅಳಿವು ಉಳಿವಿನ ಪ್ರಶ್ನೆ ಎಲ್ಲರ ಒಂದು ಮತದಲ್ಲಿರುತ್ತದೆ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುವರ್ಣಗೌರಿ ಕೊಣ್ಣೂರ ಹೇಳಿದರು.
ಅವರು ಶನಿವಾರ ದಿ2ರಂದು ಸ್ಥಳೀಯ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಮತಧಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಲಿ ಎಂಬ ಮಹದಾಸೆಯಿಂದ ಭಾರತ ಚುನಾವಣಾ ಆಯೋಗವು ಜಾಗೃತಿ ಮೂಡಿಸುತ್ತಿದೆ. ಭಾರತದ ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೆ ಮತದಾನದ ಮೂಲಭೂತ ಹಕ್ಕು ನೀಡಿದೆ. ರಾಷ್ಟ್ರದ ಪ್ರಗತಿಗಾಗಿ ಎಲ್ಲರೂ ಕಡ್ಡಾಯವಾಗಿ ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಉತ್ತಮ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದರು.
ನಂತರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕರಪತ್ರ ವಿತರಿಸಿ ಮತ ಚಲಾಯಿಸವಂತೆ ಮತದಾರರಿಗೆ ಅರಿವು ಮೂಡಿಸಿದರು. ಮತಗಟ್ಟೆ ಅಧಿಕಾರಿಗಳಾದ ಬಿ ಎಸ್ ಗಾಣಗಿ, ಎಮ್ ಆಯ್ ಚೆನ್ನಿನಾಯ್ಕರ, ಸಿ ಎಮ್ ಹೊಸುರ, ಎನ್ ಬಿ ದಾಸ್ತಿಕೊಪ್ಪ, ಎಸ್ ಜಿ ಸಂಗೋಳಿ, ಆಶಾ ಕಾರ್ಯಕತರ್ೆಯರಾದ ಎಲ್. ಎಮ್. ಮಾಳಕ್ಕನವರ, ಜಿ. ಆರ್. ಮುಕ್ಕನವರ, ಆರ್. ಸಿ. ಪಾಟೀಲ, ಅಂಗನವಾಡಿ ಕಾರ್ಯಕತರ್ೆಯರಾದ ವಿ. ಎಸ್. ಪಾಟೀಲ, ಎಸ್. ಆರ್. ಮೂಡಲಗಿ, ಎಮ್. ವಾಯ್. ಗೋಪಾಳಿ, ಎನ್. ಎ. ಸನದಿ, ಎಸ್. ಎಮ್. ಆಯಟ್ಟಿ ಕಾರ್ಯದಶರ್ಿ ಪ್ರಕಾಶ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 