ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಿ : ನ್ಯಾಯಾಧೀಶ ವಿಜಯ ಕುಮಾರ್
ಕಾರವಾರ 25: ದೇಶವು ವಿದ್ಯಾವಂತರಿಂದ ಕೂಡಿದ್ದು, ಚುನಾವಣೆಯಲ್ಲಿ ಮತಚಲಾಯಿಸುವಾಗ ಅಭ್ಯರ್ಥಿಗಳ ನೀಡುವ ಆಸೆ ಆಮಿಷಗಳಿಗೆ ಹಾಗೂ ವಿವಿಧ ಕಾರಣಗಳಿಗೆ ಬಲಿಯಾಗಿ ಮತಚಲಾಯಿಸದೇ ಅರ್ಹತೆಯನ್ನು ನೋಡಿ ಮತ ಚಲಾಯಿಸಿ ಆಡಳಿತಕ್ಕೆ ಉತ್ತಮ ಜನಪ್ರತಿನಿದಿಯನ್ನು ಕೊಡುಗೆ ನೀಡಿ ಎಂದುಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಡಿ.ಎಸ್ ವಿಜಯ ಕುಮಾರ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿದ್ದ ಜಿಲ್ಲಾಡಳಿತದ ವತಿಯಿಂದ ನಡೆದ 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.ದೇಶದಲ್ಲಿ ಪ್ರಸ್ತುತ 145 ಕೋಟಿ ಜನಸಂಖ್ಯೆಯಿದ್ದು ನಮ್ಮ ದೇಶ ವಿಶ್ವದಲ್ಲೇ ಅತಿ ಹೆಚ್ಚು ಜನ ಸಂಖ್ಯೆಯನ್ನು ಹೊಂದಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು ಇಲ್ಲಿಯವರೆಗೆ ಸಮರ್ಕವಾಗಿ ಚುನಾವಣೆಯುನಡೆಯುತ್ತಿರುವುದು ಶ್ಲಾಘನೀಯವಾಗಿದೆ.ಚುನಾವಣೆಯಲ್ಲಿ ಚುನಾವಣಾಧಿಕಾರಿಕಾರಗಳ ಪ್ರಾತ್ರ ಬಹುಮುಖ್ಯವಾದುದು. ಚುನಾವಣೆ ಪ್ರಜಾ ಪ್ರಭುತ್ವಕ್ಕೆಬುನಾದಿಯಾಗಿದ್ದು, ದೇಶದ ಮುಂದಿನ ಪ್ರಜೆಗಳಾದ ಯುವ ಮತದಾರರು ಮತ್ತು ನಾವುಗಳು ಎಲ್ಲರೂ ಒಟ್ಟು ಗೂಡಿ ಜಾವಾಬ್ದಾರಿಯಿಂದ ಎಲ್ಲರೂ ತಪ್ಪದೇ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ದೇಶದ ಅಭಿವೃದ್ಧಿಗೆ ಕಾರಣಿಭೂತರಾಗೋಣ ಎಂದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರೀಯಾ ಮಾತನಾಡಿ, ದೇಶದಲ್ಲಿ 2011 ರಿಂದ ರಾಷ್ಟೀಯ ಮತದಾರರ ದಿನಾಚರಣೆನ್ನು ಆಚರಿಸಿಕೊಂಡು ಬರುತ್ತಿದ್ದು. ನಮ್ಮ ಜಿಲ್ಲೆಯು 6 ವಿಧಾನ ಸಭಾ ಕ್ಷೇತ್ರ ಮತ್ತು 1 ಲೋಕಸಭಾ ಕ್ಷೇತ್ರವನ್ನು ಒಳಗೊಂಡಿದ್ದು, ಪ್ರತಿ ವರ್ಷ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ 12 ಲಕ್ಷ 22 ಸಾವಿರ ಮತದಾರರಿದ್ದಾರೆ.ಜಿಲ್ಲೆಯು ಗುಡ್ಡಗಾಡು ಪ್ರದೇಶವಾಗಿದ್ದು ಈ ಬಾರಿ 10 ಹೊಸ ಮತದಾನ ಕೇಂದ್ರಗಳನ್ನು ತೆರಯಲಾಗಿದ್ದು, ಈ ವರ್ಷ 7,942 ಹೊಸ ಮತದಾರರು ನೋಂದಣಿಯಾಗಿದ್ದಾರೆ, ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಸ್ವೀಪ್ ವತಿಯಿಂದ ಅನೇಕ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ. ಜಿಲ್ಲೆಯಿಂದ ಮಾಸ್ಟರ್ ಟ್ರೆನರ್ ದಿನೇಶ್ ಶೇಟ್ ಅವರಿಗೆ ರಾಜ್ಯ ಮಟ್ಟದ ಉತ್ತಮ ಮಾಸ್ಟರ್ ಟ್ರೆನರ್ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.ಪ್ರತಿಯೋಬ್ಬ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವ ಮೂಲಕ ಯಾವುದೇ ಅಸೆ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಜಗತ್ತಿನ ಬೃಹತ್ ಪ್ರಜಾ ಪ್ರಭುತ್ವನ್ನು ಯಶಸ್ವಿಗೊಳಿಸುವುದು ಪ್ರತಿಯೊಬ್ಬ ಮತದಾರರ ಕರ್ತವ್ಯವಾಗಿದೆ ಎಂದರು.ಇದೇ ಸಂದರ್ಭದಲ್ಲಿ 18 ವರ್ಷ ಮೇಲ್ಪಟ್ಟ ಯುವ ಮತದಾರರಿಗೆ ಸಾಂಕೇತಿಕವಾಗಿ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ ಸ್ವಿಪ್ ಆಯೋಜಿಸಿದ ವಿವಿಧ ಸ್ಪರ್ದೇಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.ಉಪವಿಭಾಗಾಧಿಕಾರಿ ಕನಿಷ್ಕ ಸ್ವಾಗತಿಸಿದರು, ಶಿಕ್ಷಕಿ ವನಿತಾ ಶೇಟ್ ನಿರೂಪಿಸಿದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ವಂದಿಸಿದರು.