ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಮತಯಂತ್ರಗಳು ಭದ್ರ
ಲೋಕದರ್ಶನ ವರದಿ
ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಎಲ್ಲ 1938 ಮತಗಟ್ಟೆಗಳ ಮತಯಂತ್ರಗಳು ಮತ ಏಣಿಕೆ ಕೇಂದ್ರವಾದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಕ್ತ ಭದ್ರತೆಯೊಂದಿಗೆ ತರಲಾಯಿತು.
ಬುಧವಾರ ಮತ ಏಣಿಕೆ ಕೇಂದ್ರವಾದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಚುನಾವಣಾ ವೀಕ್ಷಕರಾದ ನರಸಿಂಹಗಾರಿ ಎಲ್.ಟಿ.ರೆಡ್ಡಿ ಹಾಗೂ ಆಯಾ ಪಕ್ಷದ ಬೂತ ಏಜೆಂಟರಗಲ ಸಮ್ಮುಖದಲ್ಲಿ ಮತಯಂತ್ರಗಳನ್ನು ಭದ್ರತಾ ಕೊಠಡಿಯಲ್ಲಿರಿಸಿ ಬೀಗಮುದ್ರೆ ಹಾಕಲಾಯಿತು.
ಬಾಗಲಕೋಟೆ ಲೋಕಸಭಾ ಚುನಾವಣೆಗೆ ಸ್ಥಾಪಿಸಲಾದ ಒಟ್ಟು 1938 ಮತಗಟ್ಟೆಗಳಲ್ಲಿ ಮಂಗಳವಾರ ಶಾಂತಿಯುತವಾಗಿ ಮತದಾನ ನಡೆದಿದ್ದು, ಮತದಾನದ ನಂತರ ಕರ್ತವ್ಯ ನಿರತ ಸಿಬ್ಬಂದಿಗಳು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಡಿಮಸ್ಟರಿಂಗ್ ಕೇಂದ್ರಗಳಿಗೆ ಮತಯಂತ್ರಗಳನ್ನು ತಲುಪಿಸಿದರು.
ಡಿಮಸ್ಟರಿಂಗ್ ಕೇಂದ್ರಗಳಿಂದ ಏಣಿಕೆ ಕೇಂದ್ರವಾದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಕ್ತ ಭದ್ರತೆಯೊಂದಿಗೆ ಮತಯಂತ್ರಗಳನ್ನು ಕಳುಹಿಸಿಕೊಡಲಾಯಿತು. ತೋವಿವಿಗೆ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದ ಮತಯಂತ್ರಗಳನ್ನು ಸ್ವೀಕರಿಸುವ ಕಾರ್ಯ ನಡೆದು ಮತಯಂತ್ರಗಳನ್ನು ಭದ್ರತಾ ಕೊಠಡಿಯಲ್ಲಿರಿಸಿ ಬೀಗಮುದ್ರೆ ಹಾಕಲಾಯಿತು. ಮೇ 23 ರಂದು ಮತ ಏಣಿಕೆ ಕಾರ್ಯ ನಡೆಯಲಿದ್ದು, ಅಲ್ಲಿಯವರೆಗೆ ಬಿಗಿ ಬಂದೋಬಸ್ತ ವ್ಯವಸ್ಥೆ ಕಲ್ಪಿಸಲಾಗಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ರಾಮಚಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಸೇರಿದಂತೆ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 