ವಡ್ಡರಬಂಡೆ ರಾಜಕಾಲುವೆ ಸೇತುವೆ ಪುನರ್ ನಿರ್ಮಿಸಲು ಒತ್ತಾಯ
Waddarabande Rajkaluve bridge forced to rebuild
ವಡ್ಡರಬಂಡೆ ರಾಜಕಾಲುವೆ ಸೇತುವೆ ಪುನರ್ ನಿರ್ಮಿಸಲು ಒತ್ತಾಯ
ಬಳ್ಳಾರಿ 22: ನಗರದ ವಾರ್ಡ್ ನಂ. 15, ಬಾಲಾಜಿ ರಾವ್ ರಸ್ತೆ ಕೊನೆಯ ಭಾಗದಲ್ಲಿ ವಡ್ಡರಬಂಡೆ ರಾಜ್ ಕಾಲುವೆ ರಸ್ತೆಯಲ್ಲಿ ದೊಡ್ಡ ಗುಂಡಿ ತೆಗೆದು ಸುಮಾರು ಒಂದು ತಿಂಗಳಾದರೂ ಕಾಮಗಾರಿ ಕಾರ್ಯ ಪ್ರಾರಂಭ ಮಾಡಿರುವುದಿಲ್ಲ ಏಕೆ.ಈ ರಸ್ತೆಯು ಮಧ್ಯಭಾಗದಲ್ಲಿರುವುದರಿಂದ ಹಾಗೂ ಅಕ್ಕ-ಪಕ್ಕದಲ್ಲಿ ಗ್ಯಾರೇಜ್ಗಳು ಮತ್ತು ಲಗೇಜ್ ಆಟೋಗಳು ಮತ್ತು ಭಾರಿ ವಾಹನಗಳು ನಿಲ್ಲ್ಲುವುದರಿಂದ ಈ ಸದರಿ ರಸ್ತೆಯಲ್ಲಿ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಕ್ಕೆ ಹಾಗೂ ಓಡಾಡುವುದಕ್ಕೆ ತುಂಬಾ ತೊಂದರೆಯಾಗುತ್ತದೆ.ಇದನ್ನು ಸರಿಪಡಿಸುವುದರಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಯಾಕೇ ನಿರ್ಲಕ್ಷ್ಯತನ ತೋರುತ್ತಿದ್ದಾರೆನ್ನುವುದು ತಿಳಿಯುತ್ತಿಲ್ಲ, ಒಂದು ವೇಳೆ ರಾತ್ರಿ ಸಮಯದಲ್ಲಿ ಅಪಘಾತವಾದರೇ ಅದಕ್ಕೆ ಯಾರು ಹೊಣೆಗಾರರು ? ಆದ್ದರಿಂದ ಮಾನ್ಯರಾದ ತಾವುಗಳು ದಯಮಾಡಿ ಸದರಿ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂದು ಮೇಯರ್ ನಂದೀಶ್ ಅವರಿಗೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರರೆಡ್ಡಿ, ಎಸ್.ಕೃಷ್ಣ, ಜಿ.ಎಂ. ಭಾಷ, ಪಿ. ಶ್ರೀನಿವಾಸರೆಡ್ಡಿ, ಉಪ್ಪಾರ ಮಲ್ಲಪ್ಪ, ಶ್ರೀನಿವಾಸರೆಡ್ಡಿ ಎಂ, ಎಂ.ಕೆ. ಜಗನ್ನಾಥ, ಪಿ. ನಾರಾಯಣ,ಕೆ. ವೆಂಕಟೇಶ, ಎಂ. ಅಭಿಷೇಕ್ ಮತ್ತು ಇತರರು ಆಗಮಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 