ನೀರಿನ ಜಲ ಕುಂಭ ಕಾಮಗಾರಿಗೆ ಚಾಲನೆ
Water tank construction work launched
ಸಂಬರಗಿ 19: ಕೆಂಪವಾಡ ಸಕ್ಕರೆ ಕಾರಖಾನೆ ಅಧ್ಯಕ್ಷ ಶ್ರೀಮಂತ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಗ್ರಾಮ ಪಂಚಾಯತ್ ನಿಧಿಯಿಂದ ರಸ್ತೆಗಳು, ಒಳಚರಂಡಿಗಳು, ಸ್ಮಶಾನ ಶೆಡ್ಗಳಂತಹ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯತ್ನ ಹಾಲಿ ಸದಸ್ಯ ಅಶೋಕ್ ಡಿ ಪಾಟೀಲ್ ತಿಳಿಸಿದ್ದಾರೆ.
ಶಿನಾಳ ಗ್ರಾಮದಲ್ಲಿ ಸ್ಮಶಾನದ ಬಳಿಯ ನೀರಿನ ಜಲ ಕುಂಭ ಕಾಮಗಾರಿಯನ್ನು ಚಾಲನೆ ನೀಡಿ ಮಾತನಾಡಿ ಅವರು ಶ್ರೀಮಂತ್ ಪಾಟೀಲ್ ಗ್ರಾಮದ ಅಭಿವೃದ್ಧಿಯಲ್ಲಿ ಅಮೂಲ್ಯವಾದ ಪಾತ್ರವನ್ನು ವಹಿಸಿದ್ದಾರೆ. ಗ್ರಾಮದಲ್ಲಿ ಪ್ರೌಡ್ ಶಾಲೆ ಮತ್ತು ರೈತರ ಹೊಲಗಳಿಗೆ ನೀರು ಒದಗಿಸಲು ಅನೇಕ ನೀರಿನ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ಪ್ರಯತ್ನದಿಂದ ಗ್ರಾಮದಲ್ಲಿ ಹರಿತ ಕಾಂತಿವಾಗಿದೆ
ಹಿಮ್ಮತ್ ಪಾಟೀಲ್, ಸುಖದೇವ್ ಕವಟೆಕರ್, ಸುಧಾಕರ್ ಗವಳಿ, ರಾಮ ಸಾವಂತ್, ಪರಶ್ರಾಮ್ ಪಾಟೀಲ್, ರಾಜೇಂದ್ರ ಪಾಟೀಲ್, ಗುತ್ತಿಗೆದಾರ ಹನುಮಂತ್ ಮಾದರ್ ಮತ್ತು ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 