ಗಾಂಧೀಜಿ ಹಾಗೂ ಲಾಲ್ ಬಹುದ್ದೂರ ಶಾಸ್ತ್ರೀಜಿ ಅವರ ಸಂದೇಶವನ್ನು ನವ್ಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು : ಜಿಲ್ಲಾಧಿಕಾರಿ
We should implement the messages of Gandhiji and Lal Bahadur Shastriji in our lives: District Colle
ಗಾಂಧೀಜಿ ಹಾಗೂ ಲಾಲ್ ಬಹುದ್ದೂರ ಶಾಸ್ತ್ರೀಜಿ ಅವರ ಸಂದೇಶವನ್ನು ನವ್ಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು : ಜಿಲ್ಲಾಧಿಕಾರಿ
ಗದಗ 02: ರಾಷ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ ಶಾಸ್ತ್ರೀಜಿ ಅವರ ಸಂದೇಶವನ್ನು ನಾವೆಲ್ಲರೂ ನವ್ಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ಹೇಳಿದರು. ನಗರದ ಗಾಂಧೀ ಸರ್ಕಲ್ ಹತ್ತಿರ ಗುರುವಾರ ಜಿಲ್ಲಾಡಳಿತ,ಗದಗ-ಬೆಟಗೇರಿ ನಗರಸಭೆ ಆಶ್ರಯದಲ್ಲಿ ರಾಷ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ ಶಾಸ್ತ್ರೀಜೀ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಪುತ್ತಳಿಗೆ ಮಾಲಾರೆ್ಣ ಮಾಡಿದರು ಅವರು ಮಾತನಾಡಿದರು. ಇದೇ ಸಂಭರ್ದದಲ್ಲಿ ಸ್ವಚ್ಚತಾ ಹೀ ಸೇವಾ ಹಾಗೂ ನಮಸ್ತೆ ಅಭಿಯಾನದಡಿಯಲ್ಲಿ ಗುರುತಿಸಲಾದ ಸೆಪ್ಟಿಕ್ ಟ್ಯಾಂಕ್ ಮತ್ತು ಸೀವರ್ ಸ್ವಚ್ಚತಾ ಕೆಲಸಗಾರರಿಗೆ ಸುರಕ್ಷಾ ಕಿಟ್ಗಳನ್ನು ಹಾಗೂ ಆಯುಷ್ಮಾನ್ ಭಾರತ್ ಕಾರ್ಡಗಳನ್ನು ವಿತರಿಸಿ ನಗರದ ಸ್ವಚ್ಚತೆ ಕಾರ್ಯದಲ್ಲಿ ಸ್ವಚ್ಚತಾ ಕೆಲಸಗಾರರ ಪಾತ್ರ ಮಹತ್ವದಾಗಿದ್ದು ಈ ನಿಟ್ಟಿನಲ್ಲಿ ನಗರದ ಎಲ್ಲಾ ಪೌರಕಾರ್ಮಿಕರು ನಗರಸಭೆಯಿಂದ ವಿತರಿಸಲಾಗುವ ಸುರಕ್ಷಾ ಕಿಟ್ಗಳನ್ನು ಧರಿಸಿಕೊಂಡು ಕೆಲಸ ಮಾಡವಂತೆ ಅಧಿಕಾರಿಗಳ ಕ್ರಮವಹಿಸಬೇಕೆಂದು ಎಂದರು.ಇದೇ ಸಚಿದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ತಳಿಗೆ ಮಾಲಾರೆ್ಣ ಮಾಡಿ ಉದ್ಯಾನದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನ ನೀಡಿದರು. ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಬಸವನಗೌಡ ಕೊಟೂರು, ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಾರ್ಯ ಪಾಲಕ ಅಭಿಯಂತರ ಜಗದೀಶ ಹೊಸಮನಿ, ಅಧಿಕಾರಿಗಳಾದ ಬಸವರಾಜ ಬಳ್ಳಾರಿ, ಆನಂದ ಬದಿ, ಎಚ್ ಎ ಬಂಡಿವಡ್ಡರ ಸೇರಿದಂತೆ ೆ ಸಿಬ್ಬಂಧಿ ವರ್ಗದವರು ಹಾಗೂ ಎನ್.ಸಿ.ಸಿ ವಿಧ್ಯಾರ್ಥಿಗಳು, ನಗರಸಭೆ ಕಮ್ಯೂನಿಟಿ ಮೊಬಲ್ಶೆಜರ್ಗಳು, ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 